ಮೈಸೂರು: ಗುಜರಾತ್ನ ಚಿನ್ನಾಭರಣ ವ್ಯಾಪಾರಸ್ಥರೊಬ್ಬರಿಗೆ ವಂಚಕರು 500 ರೂ. ಮುಖಬೆಲೆಯ 1.3ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ವಂಚನೆ ಪ್ರಕರಣದ ಪ್ರಮುಖ ವಿಶೇಷವೆಂದರೆ ವ್ಯಾಪಾರಸ್ಥರಿಗೆ ವಂಚಕರು ನೀಡಿದ್ದ 500 ರೂ. ಮುಖಬೆಲೆಯ 1.3ಕೋಟಿ ಮೌಲ್ಯದ ನಕಲಿ ನೋಟುಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವಿರದೇ ಬಾಲಿವುಡ್ ನಟ ಅನುಪಮ್ ಖೇರ್ ಅವರ ಚಿತ್ರವಿದೆ. ಸದ್ಯ, ಈ ನೋಟುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಚಿನ್ನಾಭರಣ ವ್ಯಾಪಾರಸ್ಥರ ಹತ್ತಿರ 2 ಕೆ.ಜಿ.ಚಿನ್ನ ಖರೀದಿ ಒಪ್ಪಂದ ಮಾಡಿಕೊಂಡಿದ್ದ ವಂಚಕರು 1.3 ಕೋಟಿ ರೂ. ನಗದು ಹಣ ಇದೆ ಎಂದು ಹೇಳಿ ಹಣದ ಬ್ಯಾಗ್ನ್ನು ನೀಡಲು ಬಂದಿದ್ದರು. ಆದರೆ ವಂಚಕರು ನಕಲಿ ನೋಟುಗಳ ಜೊತೆಗೆ ಅನೇಕ ಅಸಲಿ ನೋಟುಗಳನ್ನು ಮೇಲ್ಭಾಗ ತೋರಿಕೆಗಾಗಿ ಇಟ್ಟಿದ್ದರು. ಇದೇ ವೇಳೆಗೆ ವ್ಯಾಪಾರಸ್ಥರ ನಂಬಿಕೆಗಳಿಸಿದ್ದ ವಂಚಕರು ಇನ್ನೊಂದು ಅಂಗಡಿ ಹತ್ತಿರ ಚಿನ್ನ ಖರೀದಿಸಬೇಕಿದೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಬ್ಯಾಗ್ನಲ್ಲಿದ್ದ ಹಣವನ್ನು ತಕ್ಷಣವೇ ಯಂತ್ರದ ಸಹಾಯದಿಂದ ಎಣಿಸಲು ಹೋದಾಗ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಮುಖಬೆಲೆಯ ನೋಟುಗಳನ್ನು ಇಡಲಾಗಿದೆ ಎಂಬ ಅಸಲಿ ಸತ್ಯ ಗೊತ್ತಾಗಿ ಆಶ್ಚರ್ಯಗೊಂಡ ವ್ಯಾಪಾರಸ್ಥನು, ನವರಂಗ್ಪುರ ಪೊಲೀಸ್ ಠಾಣೆಗೆ ವಂಚಕರ ವಿರುದ್ಧ ದೂರು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ವಂಚಕರ ವಿರುದ್ಧ ದೂರು ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದೇನೆ ಎಂದು ಹೇಳಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…