ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.
ನವೆಂಬರ್.14ರಂದು ನವದೆಹಲಿಯ ಇಡಿ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಇದನ್ನು ಓದಿ: ಮುಂಬೈನಲ್ಲಿ ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ ಎನ್ನಲಾಗಿರುವ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ನವೆಂಬರ್.14ರಂದು ವಿಚಾರಣೆಗಾಗಿ ಅನಿಲ್ ಅಂಬಾನಿ ಅವರನ್ನು ಹಾಜರುಪಡಿಸಲು ಕೇಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.





