ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ.
ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಸ್ಥಾಪಿತವಾದ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತು.
ಸಂಸದ ರಾವತ್ ಅವರಿಗೆ ಹೃದ್ರೋಗ ಇರುವುದನ್ನು ವೈದ್ಯಕೀಯ ದಾಖಲೆಗಳ ಮೂಲಕ ಗಮನಿಸಿದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು ನ್ಯಾಯಾಂಗ ಬಂಧನದಲ್ಲಿರುವಾಗ ಸಂಸದರಿಗೆ ಅವರ ಔಷಧಿಗಳ ಜೊತೆಗೆ ಮನೆಯಿಂದ ಆಹಾರ ಪೂರೈಸಲು ಅನುಮತಿಸಿದರು. ವೈದ್ಯರ ಸೂಚನೆಯಂತೆ ಸೂಕ್ತ ಔಷಧಗಳನ್ನು ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.
ಮುಂಬೈನ ಪತ್ರಾ ಚಾಲ್ ಭೂ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ₹ 1 ಕೋಟಿಗೂ ಹೆಚ್ಚು ಹಣ ನೇರವಾಗಿ ಪಡೆದ ಆರೋಪದಡಿ ಆಗಸ್ಟ್ 1 ರ ಮಧ್ಯರಾತ್ರಿ ರಾವತ್ ಅವರನ್ನು ಬಂಧಿಸಲಾಗಿತ್ತು.
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…