ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ.
ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಸ್ಥಾಪಿತವಾದ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತು.
ಸಂಸದ ರಾವತ್ ಅವರಿಗೆ ಹೃದ್ರೋಗ ಇರುವುದನ್ನು ವೈದ್ಯಕೀಯ ದಾಖಲೆಗಳ ಮೂಲಕ ಗಮನಿಸಿದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು ನ್ಯಾಯಾಂಗ ಬಂಧನದಲ್ಲಿರುವಾಗ ಸಂಸದರಿಗೆ ಅವರ ಔಷಧಿಗಳ ಜೊತೆಗೆ ಮನೆಯಿಂದ ಆಹಾರ ಪೂರೈಸಲು ಅನುಮತಿಸಿದರು. ವೈದ್ಯರ ಸೂಚನೆಯಂತೆ ಸೂಕ್ತ ಔಷಧಗಳನ್ನು ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.
ಮುಂಬೈನ ಪತ್ರಾ ಚಾಲ್ ಭೂ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ₹ 1 ಕೋಟಿಗೂ ಹೆಚ್ಚು ಹಣ ನೇರವಾಗಿ ಪಡೆದ ಆರೋಪದಡಿ ಆಗಸ್ಟ್ 1 ರ ಮಧ್ಯರಾತ್ರಿ ರಾವತ್ ಅವರನ್ನು ಬಂಧಿಸಲಾಗಿತ್ತು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…