ದೇಶ- ವಿದೇಶ

ಅಕ್ರಮ ಹಣ ವರ್ಗಾವಣೆ: ಶಿವಸೇನಾ ಸಂಸದ ಸಂಜಯ್ ರಾವುತ್‌ಗೆ ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಮುಂಬೈ ನ್ಯಾಯಾಲಯ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ.

ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಸ್ಥಾಪಿತವಾದ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತು.

ಸಂಸದ ರಾವತ್‌ ಅವರಿಗೆ ಹೃದ್ರೋಗ ಇರುವುದನ್ನು ವೈದ್ಯಕೀಯ ದಾಖಲೆಗಳ ಮೂಲಕ ಗಮನಿಸಿದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು ನ್ಯಾಯಾಂಗ ಬಂಧನದಲ್ಲಿರುವಾಗ ಸಂಸದರಿಗೆ ಅವರ ಔಷಧಿಗಳ ಜೊತೆಗೆ ಮನೆಯಿಂದ ಆಹಾರ ಪೂರೈಸಲು ಅನುಮತಿಸಿದರು. ವೈದ್ಯರ ಸೂಚನೆಯಂತೆ ಸೂಕ್ತ ಔಷಧಗಳನ್ನು ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.

ಮುಂಬೈನ ಪತ್ರಾ ಚಾಲ್ ಭೂ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ₹ 1 ಕೋಟಿಗೂ ಹೆಚ್ಚು ಹಣ ನೇರವಾಗಿ ಪಡೆದ ಆರೋಪದಡಿ ಆಗಸ್ಟ್ 1 ರ ಮಧ್ಯರಾತ್ರಿ ರಾವತ್ ಅವರನ್ನು ಬಂಧಿಸಲಾಗಿತ್ತು.

andolana

Recent Posts

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 mins ago

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

17 hours ago