ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ.
ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಸ್ಥಾಪಿತವಾದ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತು.
ಸಂಸದ ರಾವತ್ ಅವರಿಗೆ ಹೃದ್ರೋಗ ಇರುವುದನ್ನು ವೈದ್ಯಕೀಯ ದಾಖಲೆಗಳ ಮೂಲಕ ಗಮನಿಸಿದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು ನ್ಯಾಯಾಂಗ ಬಂಧನದಲ್ಲಿರುವಾಗ ಸಂಸದರಿಗೆ ಅವರ ಔಷಧಿಗಳ ಜೊತೆಗೆ ಮನೆಯಿಂದ ಆಹಾರ ಪೂರೈಸಲು ಅನುಮತಿಸಿದರು. ವೈದ್ಯರ ಸೂಚನೆಯಂತೆ ಸೂಕ್ತ ಔಷಧಗಳನ್ನು ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.
ಮುಂಬೈನ ಪತ್ರಾ ಚಾಲ್ ಭೂ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ₹ 1 ಕೋಟಿಗೂ ಹೆಚ್ಚು ಹಣ ನೇರವಾಗಿ ಪಡೆದ ಆರೋಪದಡಿ ಆಗಸ್ಟ್ 1 ರ ಮಧ್ಯರಾತ್ರಿ ರಾವತ್ ಅವರನ್ನು ಬಂಧಿಸಲಾಗಿತ್ತು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…