ದೇಶ- ವಿದೇಶ

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ ಮುಂಗಾರು ಮಳೆ ಅಪ್ಪಳಿಸಲಿದ್ದು, ಅಂಡಮಾನ್ ಮತ್ತು ಕೇರಳಕ್ಕೆ ಮುಂಗಾರು ಮಾರುತಗಳು ಸಾಮಾನ್ಯಕ್ಕಿಂತ ಬೇಗನೇ ಆಗಮಿಸಲಿವೆ ಎಂದು ಹೇಳಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮುನ್ಸೂಚನೆಯಂತೆ, ನೈಋತ್ಯ ಮುಂಗಾರು ಮಳೆಯು ಮೇ 14 ಮತ್ತು 16, 2026ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮುಂಚಿತವಾಗಿ ಪ್ರವೇಶಿಸಲಿದೆ. ಐಎಂಡಿಯ ಅಧಿಕೃತ ಅಂದಾಜಿನ ಪ್ರಕಾರ ಕೇರಳಕ್ಕೆ ಸಾಮಾನ್ಯ ದಿನಾಂಕವಾದ ಜೂನ್ 1ರ ಹತ್ತಿರದಲ್ಲಿ ಅಥವಾ ಅದಕ್ಕಿಂತಲೂ ಮೊದಲೇ ಮಳೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಬಾರಿ ನೈಋತ್ಯ ಮುಂಗಾರು ಅವಧಿಗಿಂತ ಮುಂಚಿತವಾಗಿ ಅಂಡಮಾನ್ ಪ್ರವೇಶಿಸಲಿದ್ದು, ಮೇ ಕೊನೆಯ ವಾರದಲ್ಲೇ ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಾರಿಯ ಮಳೆಯ ಮೇಲೆ ’ಎಲ್ ನಿನೊ’ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಡಿಕೆಗಿಂತ ಹೆಚ್ಚು ಮಳೆ
ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ವಾಡಿಕೆಯಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದು ಕೃಷಿ ಚಟುವಟಿಕೆಗಳಿಗೆ ಕೆಲ ಮಟ್ಟಿಗೆ ಸಹಕಾರಿ ಆಗಬಹುದು. ಆದರೆ, ಈಶಾನ್ಯ, ಪೂರ್ವ ಹಾಗೂ ಕೇಂದ್ರ ಭಾರತದ ಕೆಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ವಾಡಿಕೆಯಷ್ಟೇ ಅಥವಾ ಅದಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದರ ನಡುವೆ ದೇಶದ ಬಹುತೇಕ ಭಾಗಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಭಾರತ ಹಾಗೂ ಹಿಮಾಲಯದ ತಪ್ಪಲಿನ ಪ್ರದೇಶಗಳಲ್ಲಿ ಹೀಟ್‌ವೇವ್ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ಏಪ್ರಿಲ್ ತಿಂಗಳಲ್ಲಿ ದಕ್ಷಿಣ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದರೆ, ಇತರ ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲೇ ಇತ್ತು.

ಕರ್ನಾಟಕದ ಮೇಲೂ ಪರಿಣಾಮ
2026ರ ಮುಂಗಾರು ಮತ್ತು ಪ್ರಸ್ತುತ ಹವಾಮಾನ ಬದಲಾವಣೆಗಳು ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ಏಪ್ರಿಲ್ ಅಂತ್ಯ ಮತ್ತು ಮೇ ಆರಂಭದಲ್ಲಿ ರಾಜ್ಯದಾದ್ಯಂತ ಸುರಿದ ಮುಂಗಾರು ಪೂರ್ವ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು 1-2 ಡಿಗ್ರಿಯಷ್ಟು ಇಳಿಕೆಯಾಗಿದೆ. ಮಳೆಯ ಹೊರತಾಗಿಯೂ, ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು ಇನ್ನೂ 40-44ಲ ಆಸುಪಾಸಿನಲ್ಲಿದ್ದು, ಬಿಸಿಗಾಳಿಯ ಅಬ್ಬರ ಮುಂದುವರಿದಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago