ದೇಶ- ವಿದೇಶ

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ ಮುಂಗಾರು ಮಳೆ ಅಪ್ಪಳಿಸಲಿದ್ದು, ಅಂಡಮಾನ್ ಮತ್ತು ಕೇರಳಕ್ಕೆ ಮುಂಗಾರು ಮಾರುತಗಳು ಸಾಮಾನ್ಯಕ್ಕಿಂತ ಬೇಗನೇ ಆಗಮಿಸಲಿವೆ ಎಂದು ಹೇಳಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮುನ್ಸೂಚನೆಯಂತೆ, ನೈಋತ್ಯ ಮುಂಗಾರು ಮಳೆಯು ಮೇ 14 ಮತ್ತು 16, 2026ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮುಂಚಿತವಾಗಿ ಪ್ರವೇಶಿಸಲಿದೆ. ಐಎಂಡಿಯ ಅಧಿಕೃತ ಅಂದಾಜಿನ ಪ್ರಕಾರ ಕೇರಳಕ್ಕೆ ಸಾಮಾನ್ಯ ದಿನಾಂಕವಾದ ಜೂನ್ 1ರ ಹತ್ತಿರದಲ್ಲಿ ಅಥವಾ ಅದಕ್ಕಿಂತಲೂ ಮೊದಲೇ ಮಳೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಬಾರಿ ನೈಋತ್ಯ ಮುಂಗಾರು ಅವಧಿಗಿಂತ ಮುಂಚಿತವಾಗಿ ಅಂಡಮಾನ್ ಪ್ರವೇಶಿಸಲಿದ್ದು, ಮೇ ಕೊನೆಯ ವಾರದಲ್ಲೇ ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಾರಿಯ ಮಳೆಯ ಮೇಲೆ ’ಎಲ್ ನಿನೊ’ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಡಿಕೆಗಿಂತ ಹೆಚ್ಚು ಮಳೆ
ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ವಾಡಿಕೆಯಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದು ಕೃಷಿ ಚಟುವಟಿಕೆಗಳಿಗೆ ಕೆಲ ಮಟ್ಟಿಗೆ ಸಹಕಾರಿ ಆಗಬಹುದು. ಆದರೆ, ಈಶಾನ್ಯ, ಪೂರ್ವ ಹಾಗೂ ಕೇಂದ್ರ ಭಾರತದ ಕೆಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ವಾಡಿಕೆಯಷ್ಟೇ ಅಥವಾ ಅದಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದರ ನಡುವೆ ದೇಶದ ಬಹುತೇಕ ಭಾಗಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಭಾರತ ಹಾಗೂ ಹಿಮಾಲಯದ ತಪ್ಪಲಿನ ಪ್ರದೇಶಗಳಲ್ಲಿ ಹೀಟ್‌ವೇವ್ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ಏಪ್ರಿಲ್ ತಿಂಗಳಲ್ಲಿ ದಕ್ಷಿಣ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದರೆ, ಇತರ ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲೇ ಇತ್ತು.

ಕರ್ನಾಟಕದ ಮೇಲೂ ಪರಿಣಾಮ
2026ರ ಮುಂಗಾರು ಮತ್ತು ಪ್ರಸ್ತುತ ಹವಾಮಾನ ಬದಲಾವಣೆಗಳು ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ಏಪ್ರಿಲ್ ಅಂತ್ಯ ಮತ್ತು ಮೇ ಆರಂಭದಲ್ಲಿ ರಾಜ್ಯದಾದ್ಯಂತ ಸುರಿದ ಮುಂಗಾರು ಪೂರ್ವ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು 1-2 ಡಿಗ್ರಿಯಷ್ಟು ಇಳಿಕೆಯಾಗಿದೆ. ಮಳೆಯ ಹೊರತಾಗಿಯೂ, ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು ಇನ್ನೂ 40-44ಲ ಆಸುಪಾಸಿನಲ್ಲಿದ್ದು, ಬಿಸಿಗಾಳಿಯ ಅಬ್ಬರ ಮುಂದುವರಿದಿದೆ.

 

 

ಆಂದೋಲನ ಡೆಸ್ಕ್

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

52 mins ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

2 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

5 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

9 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

9 hours ago