ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ ೧೨ರ ವರೆಗೂ ಅಧಿವೇಶನ ನಡೆಯಲಿದೆ.
ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಬಜೆಟ್ ಮಂಡಿಸಲಿದ್ದಾರೆ.
ಇನ್ನು ಈ ಬಾರಿಯ ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನ ತಿದ್ದುಪಡಿ ಮಾಡುವುದು ಸೇರಿದಂತೆ ೬ ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯ ಮಾಡಲಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಮಾಹಿತಿ ಪ್ರಕಾರ ಹಣಕಾಸು ಮಸೂದೆ, ವಿಪತ್ತು ನಿರ್ವಹಣಾ ಮಸೂದೆ, ಬಾಯ್ಲರ್ ಗಳ ಮಸೂದೆ, ಭಾರತೀಯ ವಾಯುಯಾನ ವಿಧೇಯಕಗಳ ಮಸೂದೆ, ಕಾಫಿ ಮಸೂದೆ, ರಬ್ಬರ್ ಮಸೂದೆ ಮಂಡನೆಯಾಗಲಿದೆ.
ಇನ್ನು ಮತ್ತೊಂದು ಕಡೆ ನೀಟ್ ಅಕ್ರಮ, ಕನ್ವರ್ ಯಾತ್ರೆ, ಮಣಿಪುರ ಸಂಘರ್ಷ, ರೈಲ್ವೆ ಸುರಕ್ಷತೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ಕಟ್ಟಿ ಹಾಕಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಸನ್ನದ್ಧವಾಗಿದೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…