ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ ೧೨ರ ವರೆಗೂ ಅಧಿವೇಶನ ನಡೆಯಲಿದೆ.
ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಬಜೆಟ್ ಮಂಡಿಸಲಿದ್ದಾರೆ.
ಇನ್ನು ಈ ಬಾರಿಯ ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನ ತಿದ್ದುಪಡಿ ಮಾಡುವುದು ಸೇರಿದಂತೆ ೬ ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯ ಮಾಡಲಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಮಾಹಿತಿ ಪ್ರಕಾರ ಹಣಕಾಸು ಮಸೂದೆ, ವಿಪತ್ತು ನಿರ್ವಹಣಾ ಮಸೂದೆ, ಬಾಯ್ಲರ್ ಗಳ ಮಸೂದೆ, ಭಾರತೀಯ ವಾಯುಯಾನ ವಿಧೇಯಕಗಳ ಮಸೂದೆ, ಕಾಫಿ ಮಸೂದೆ, ರಬ್ಬರ್ ಮಸೂದೆ ಮಂಡನೆಯಾಗಲಿದೆ.
ಇನ್ನು ಮತ್ತೊಂದು ಕಡೆ ನೀಟ್ ಅಕ್ರಮ, ಕನ್ವರ್ ಯಾತ್ರೆ, ಮಣಿಪುರ ಸಂಘರ್ಷ, ರೈಲ್ವೆ ಸುರಕ್ಷತೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ಕಟ್ಟಿ ಹಾಕಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಸನ್ನದ್ಧವಾಗಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…