ದೇಶ- ವಿದೇಶ

ಪಕ್ಷ ಸಂಘಟನೆಗೆ ಹೆಚ್ಚು ಒತ್ತು: ಡಿಸಿಎಂ ಡಿಕೆ ಶಿವಕುಮಾರ್‌

ಅಹಮದಾಬಾದ್‌: ಬ್ಲಾಕ್‌, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷ ಬಲಪಡಿಸುವ ಬಗ್ಗೆ ಅಹಮಾದಾಬಾದ್‌ ಅಧೀವೇಶನದಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಅಹಮದಾಬಾದ್‌ ಅಧಿವೇಶನದಲ್ಲಿ ಭಾಗವಹಿಸಲು ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬೆಳಗಾವಿ ಅಧಿವೇಶನದ ಅವಧಿಯಲ್ಲೇ ಪಕ್ಷ ಸಂಘಟನೆಯ ವಿಷಯವಾಗಿ ಚರ್ಚಿಸಲಾಗಿತ್ತು. ಪಕ್ಷ ಸಂಘಟನೆಯ ವಿಚಾರದಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಒಂದೊಂದೇ ಬದಲಾವಣೆ ಮಾಡಲಾಗುತ್ತಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗಾಗಿ ಚರ್ಚೆ ಮಾಡಲಾಗುವುದು. 1924 ರಲ್ಲಿ ಕಾಂಗ್ರೆಸ್‌ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡಿದ್ದ ಮಹಾತ್ಮ ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರು. ಅದೇ ನಿಟ್ಟಿನಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ಈ ಬಾರಿ ಕಾಂಗ್ರೆಸ್‌ನ ಗೆಲುವು ಪ್ರಧಾನಿ ಮೋದಿ ಅವರ ತವರು ಗುಜರಾತಿನಿಂದಲೇ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚಿಸುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

23 mins ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

37 mins ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

3 hours ago