ಅಹಮದಾಬಾದ್: ಬ್ಲಾಕ್, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವ ಬಗ್ಗೆ ಅಹಮಾದಾಬಾದ್ ಅಧೀವೇಶನದಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಹಮದಾಬಾದ್ ಅಧಿವೇಶನದಲ್ಲಿ ಭಾಗವಹಿಸಲು ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬೆಳಗಾವಿ ಅಧಿವೇಶನದ ಅವಧಿಯಲ್ಲೇ ಪಕ್ಷ ಸಂಘಟನೆಯ ವಿಷಯವಾಗಿ ಚರ್ಚಿಸಲಾಗಿತ್ತು. ಪಕ್ಷ ಸಂಘಟನೆಯ ವಿಚಾರದಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಒಂದೊಂದೇ ಬದಲಾವಣೆ ಮಾಡಲಾಗುತ್ತಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗಾಗಿ ಚರ್ಚೆ ಮಾಡಲಾಗುವುದು. 1924 ರಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡಿದ್ದ ಮಹಾತ್ಮ ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರು. ಅದೇ ನಿಟ್ಟಿನಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.
ಈ ಬಾರಿ ಕಾಂಗ್ರೆಸ್ನ ಗೆಲುವು ಪ್ರಧಾನಿ ಮೋದಿ ಅವರ ತವರು ಗುಜರಾತಿನಿಂದಲೇ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚಿಸುತ್ತೇನೆ ಎಂದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…