ದೇಶ- ವಿದೇಶ

ಯುಪಿಎ ಅವಧಿಗಿಂತ ಎನ್‌ಡಿಎ ಅವಧಿಯಲ್ಲೇ ಹೆಚ್ಚಿನ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಮನ್ಸುಖ್‌ ಮಾಂಡವೀಯ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಉದ್ಯೋಗಗಳ ಸೃಷ್ಟಿ ಕಡಿಮೆಯಾಗಿದೆ ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

2014-15ರ ಅವಧಿಯಲ್ಲಿ 47.15 ಕೋಟಿ ಇದ್ದ ಉದ್ಯೋಗವಕಾಶವು 2023-24ರಲ್ಲಿ ಶೇ.36 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್‌ ಮಾಂಡವೀಯ ತಿಳಿಸಿದ್ದಾರೆ.

2004-14ರ ನಡುವಿನ ಕಾಂಗ್ರೆಸ್‌ ನೇತೃತ್ವದ ಆಡಳಿತದ ಅವಧಿಯಲ್ಲಿ ಭಾರತದಲ್ಲಿ ಉದ್ಯೋಗವು ಕೇವಲ 7 ಪ್ರತಿಶತದಷ್ಟು ಬೆಳೆದಿದೆ. ಇವರ ಅವಧಿಯಲ್ಲಿ 2.9 ಕೋಟಿ ಉದ್ಯೋಗ ಹೆಚ್ಚುವರಿಯಾಗಿ ಸೃಷ್ಟಿಯಾಗಿದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ 2014-24ರ ನಡುವೆ 17.19 ಕೋಟಿ ಉದ್ಯೋಗ ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಕಳೆದ ವರ್ಷ ದೇಶದಲ್ಲಿ ಸುಮಾರು 4.6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಮನ್ಸುಖ್‌ ಮಾಂಡವೀಯ ಮಾಹಿತಿ ನೀಡಿದ್ದು, ವಿರೋಧ ಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

4 mins ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

28 mins ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

32 mins ago

ಓದುಗರ ಪತ್ರ: ಕಬ್ಬಿಣದ ಸಲಾಕೆ ತೆರವುಗೊಳಿಸಿ

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…

34 mins ago

ಓದುಗರ ಪತ್ರ: ಹೈಡ್ರೋಪೋನಿಕ್ಸ್ ಟೆಕ್‌ಪಾರ್ಕ್ ಸ್ಥಾಪಿಸಿ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…

37 mins ago

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

4 hours ago