ದೇಶ- ವಿದೇಶ

ಗಣಿಗಾರಿಕೆ ಮೇಲೆ ರಾಜ್ಯ ಸರ್ಕಾರದಿಂದ ಹೆಚ್ಚು ತೆರಿಗೆ: ಕೇಂದ್ರ ಕಾನೂನು ಸಚಿವರ ಜೊತೆ ಎಚ್‌ಡಿಕೆ ಸಭೆ

ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದರಿಂದ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತಿದೆ. ಹಾಗೆಯೇ ಗಣಿ ಮತ್ತು ಉಕ್ಕು ವಲಯದ ಸಾಧಕ-ಭಾದಕಗಳ ಮಹತ್ವದ ಅಂಶಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಜಗತ್ತಿನ ಮೂರನೇ ಬೃಹತ್‌ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕ ಹೆಜ್ಜೆ ಇಡುತ್ತಿದ್ದಾರೆ ಎಂದು ಹೇಳಿದರು.

ಮುಖ್ಯವಾಗಿ 2030ರ ವೇಳೆಗೆ ಭಾರತವು 300 ದಶಲಕ್ಷ ಟನ್‌ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಹೊಂದಿದೆ. ಇಂತಹ ಮಹತ್ವದ ಗುರಿ ಇರುವಾಗ ಗಣಿಗಾರಿಕೆ ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಎಚ್‌ಡಿಕೆ ಮಾತಿಗೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಧ್ವನಿಗೂಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

12 mins ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

14 mins ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

19 mins ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

57 mins ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

1 hour ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

2 hours ago