ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದರಿಂದ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತಿದೆ. ಹಾಗೆಯೇ ಗಣಿ ಮತ್ತು ಉಕ್ಕು ವಲಯದ ಸಾಧಕ-ಭಾದಕಗಳ ಮಹತ್ವದ ಅಂಶಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕ ಹೆಜ್ಜೆ ಇಡುತ್ತಿದ್ದಾರೆ ಎಂದು ಹೇಳಿದರು.
ಮುಖ್ಯವಾಗಿ 2030ರ ವೇಳೆಗೆ ಭಾರತವು 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಹೊಂದಿದೆ. ಇಂತಹ ಮಹತ್ವದ ಗುರಿ ಇರುವಾಗ ಗಣಿಗಾರಿಕೆ ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಎಚ್ಡಿಕೆ ಮಾತಿಗೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಧ್ವನಿಗೂಡಿಸಿದರು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…