ದೇಶ- ವಿದೇಶ

ವಿಶ್ವದ ಅತ್ಯಂತ ದುಬಾರಿ ಮರವಿದು: ಇದ್ರಿಂದಾನೇ ತಯಾರಾಗುತ್ತೆ ಐಶಾರಾಮಿ ಸುಗಂಧ ದ್ರವ್ಯಗಳು

ನವದೆಹಲಿ: ವಿಶ್ವದಲ್ಲಿ ಅತ್ಯಂತ ದುಬಾರಿ ಮರವೊಂದಿದೆ. ಅದನ್ನು ಬೇರೆ ದುಬಾರಿ ಮರಗಳಂತೆ ಫರ್ನಿಚರ್‌ ಅಥವಾ ಮತ್ತೇನೋ ಮಾಡಲು ಬಳಸಲ್ಲ. ಬದಲಿಗೆ ಸುಗಂಧ ದ್ರವ್ಯಗಳನ್ನು ತಯಾರಿಸಲು ಬಳಸುತ್ತಾರೆ.

ಸುಗಂಧ ದ್ರವ್ಯಗಳ ಉತ್ಪಾದನೆಯಲ್ಲಿ ಬಳಸುವ ಆ ದುಬಾರಿ ಮರ ಬೇರಾವುದು ಅಲ್ಲ. ಅದುವೇ ಅಕ್ವಿಲೇರಿಯಾ. ಇದನ್ನು ವುಡ್‌ ಆಫ್‌ ದಿ ಗಾಡ್ಸ್‌ ಎಂದೂ ಸಹ ಕರೆಯಲಾಗುತ್ತದೆ. ಸುಗಂಧ ದ್ರವ್ಯ ಉದ್ಯಮದಲ್ಲಿ ಇದನ್ನು ದ್ರವಚಿನ್ನ ಅಂತಲೂ ಕರೆಯಲಾಗುತ್ತದೆ.

ಈ ಮರವನ್ನು ಶತಮಾನಗಳಿಂದ ವಿಶಿಷ್ಟ ಸುಗಂಧಕ್ಕಾಗಿ ಬಳಸಲಾಗುತ್ತದೆ. ಈ ಅಮೂಲ್ಯವಾದ ಮರವು ಆಗ್ನೇಯ ಏಷ್ಯಾದ ದಟ್ಟವಾದ ಮಳೆ ಕಾಡುಗಳಿಗೆ ಸ್ಥಳೀಯವಾದ ಮರವಾಗಿದೆ. ಈ ಮರಗಳಿಗೆ ನಿರ್ದಿಷ್ಟ ಅಚ್ಚು ಬಿದ್ದು ಅದಕ್ಕೆ ಸೋಂಕಿನ ರೀತಿ ಆಗುತ್ತದೆ.

ಈ ಸೋಂಕು ಉಂಟಾದಾಗ ಅಲ್ಲಿಂದ ಮರದಲ್ಲಿ ಒಂದು ರೀತಿಯ ಸ್ರಾವ ಹೊರಬರುತ್ತದೆ. ಅದಕ್ಕೆ ಔದ್‌ ಎನ್ನಲಾಗುತ್ತದೆ. ಇದು ಅದ್ಬುತ ಸುವಾಸನೆಯನ್ನು ಹೊರ ಸೂಸುತ್ತದೆ. ಇದೇ ಕೊನೆಯ ಸುಗಂಧ ತಯಾರಿಕೆಗೆ ಕಾರಣವಾಗುತ್ತದೆ. ಈ ಮರಗಳಲ್ಲಿ ಔದ್‌ ಸೃಷ್ಟಿಯಾಗೋದು ಸಂಪೂರ್ಣವಾಗಿ ನೈಸರ್ಗಿಕ ರೀತಿಯಲ್ಲೇ.

ಅಪರೂಪದ ಸಂಗತಿಯೆಂದರೆ ಈ ಮರಗಳ ಒಂದು ಭಾಗ ಮಾತ್ರ ರಾಳವನ್ನು ಉತ್ಪಾದಿಸುತ್ತದೆ. ನಂತರ ಇದು ಸಂಗ್ರಹವಾಗಲು ದಶಕಗಳನ್ನೇ ತೆಗೆದುಕೊಳ್ಳಬಹುದು. ಈ ಸ್ರಾವದ ಬೆಲೆ ಪ್ರತಿ ಕಿಲೋ ಗ್ರಾಂಗೆ ಚಿನ್ನಕ್ಕಿಂತ ದುಬಾರಿಯಾಗಿದೆ.

ಪ್ರಸ್ತುತ ಔದ್‌ನ ಬೇಡಿಕೆ ಹೆಚ್ಚಿದ್ದು, ಜನಪ್ರಿಯತೆಯ ಉಲ್ಬಣವು ಅಕ್ವಿಲೇರಿಯಾ ಮರಗಳ ಅಪಾಯಕ್ಕೆ ಕಾರಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸುಗಂಧ ದ್ರವ್ಯ ಉದ್ಯಮದಲ್ಲಿ ಔದ್‌ ಭಾರೀ ಜನಪ್ರಿಯವಾಗಿದೆ. ಪಾಶ್ಚಿಮಾತ್ಯ ಸುಗಂಧ ದ್ರವ್ಯದಲ್ಲಿ ಈ ಅಂಶ ಇರುವಂತೆ ಉತ್ಪಾದಿಸಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

49 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

52 mins ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

1 hour ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

1 hour ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago