ನವದೆಹಲಿ: ವಿಶ್ವದಲ್ಲಿ ಅತ್ಯಂತ ದುಬಾರಿ ಮರವೊಂದಿದೆ. ಅದನ್ನು ಬೇರೆ ದುಬಾರಿ ಮರಗಳಂತೆ ಫರ್ನಿಚರ್ ಅಥವಾ ಮತ್ತೇನೋ ಮಾಡಲು ಬಳಸಲ್ಲ. ಬದಲಿಗೆ ಸುಗಂಧ ದ್ರವ್ಯಗಳನ್ನು ತಯಾರಿಸಲು ಬಳಸುತ್ತಾರೆ.
ಸುಗಂಧ ದ್ರವ್ಯಗಳ ಉತ್ಪಾದನೆಯಲ್ಲಿ ಬಳಸುವ ಆ ದುಬಾರಿ ಮರ ಬೇರಾವುದು ಅಲ್ಲ. ಅದುವೇ ಅಕ್ವಿಲೇರಿಯಾ. ಇದನ್ನು ವುಡ್ ಆಫ್ ದಿ ಗಾಡ್ಸ್ ಎಂದೂ ಸಹ ಕರೆಯಲಾಗುತ್ತದೆ. ಸುಗಂಧ ದ್ರವ್ಯ ಉದ್ಯಮದಲ್ಲಿ ಇದನ್ನು ದ್ರವಚಿನ್ನ ಅಂತಲೂ ಕರೆಯಲಾಗುತ್ತದೆ.
ಈ ಮರವನ್ನು ಶತಮಾನಗಳಿಂದ ವಿಶಿಷ್ಟ ಸುಗಂಧಕ್ಕಾಗಿ ಬಳಸಲಾಗುತ್ತದೆ. ಈ ಅಮೂಲ್ಯವಾದ ಮರವು ಆಗ್ನೇಯ ಏಷ್ಯಾದ ದಟ್ಟವಾದ ಮಳೆ ಕಾಡುಗಳಿಗೆ ಸ್ಥಳೀಯವಾದ ಮರವಾಗಿದೆ. ಈ ಮರಗಳಿಗೆ ನಿರ್ದಿಷ್ಟ ಅಚ್ಚು ಬಿದ್ದು ಅದಕ್ಕೆ ಸೋಂಕಿನ ರೀತಿ ಆಗುತ್ತದೆ.
ಈ ಸೋಂಕು ಉಂಟಾದಾಗ ಅಲ್ಲಿಂದ ಮರದಲ್ಲಿ ಒಂದು ರೀತಿಯ ಸ್ರಾವ ಹೊರಬರುತ್ತದೆ. ಅದಕ್ಕೆ ಔದ್ ಎನ್ನಲಾಗುತ್ತದೆ. ಇದು ಅದ್ಬುತ ಸುವಾಸನೆಯನ್ನು ಹೊರ ಸೂಸುತ್ತದೆ. ಇದೇ ಕೊನೆಯ ಸುಗಂಧ ತಯಾರಿಕೆಗೆ ಕಾರಣವಾಗುತ್ತದೆ. ಈ ಮರಗಳಲ್ಲಿ ಔದ್ ಸೃಷ್ಟಿಯಾಗೋದು ಸಂಪೂರ್ಣವಾಗಿ ನೈಸರ್ಗಿಕ ರೀತಿಯಲ್ಲೇ.
ಅಪರೂಪದ ಸಂಗತಿಯೆಂದರೆ ಈ ಮರಗಳ ಒಂದು ಭಾಗ ಮಾತ್ರ ರಾಳವನ್ನು ಉತ್ಪಾದಿಸುತ್ತದೆ. ನಂತರ ಇದು ಸಂಗ್ರಹವಾಗಲು ದಶಕಗಳನ್ನೇ ತೆಗೆದುಕೊಳ್ಳಬಹುದು. ಈ ಸ್ರಾವದ ಬೆಲೆ ಪ್ರತಿ ಕಿಲೋ ಗ್ರಾಂಗೆ ಚಿನ್ನಕ್ಕಿಂತ ದುಬಾರಿಯಾಗಿದೆ.
ಪ್ರಸ್ತುತ ಔದ್ನ ಬೇಡಿಕೆ ಹೆಚ್ಚಿದ್ದು, ಜನಪ್ರಿಯತೆಯ ಉಲ್ಬಣವು ಅಕ್ವಿಲೇರಿಯಾ ಮರಗಳ ಅಪಾಯಕ್ಕೆ ಕಾರಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸುಗಂಧ ದ್ರವ್ಯ ಉದ್ಯಮದಲ್ಲಿ ಔದ್ ಭಾರೀ ಜನಪ್ರಿಯವಾಗಿದೆ. ಪಾಶ್ಚಿಮಾತ್ಯ ಸುಗಂಧ ದ್ರವ್ಯದಲ್ಲಿ ಈ ಅಂಶ ಇರುವಂತೆ ಉತ್ಪಾದಿಸಲಾಗುತ್ತಿದೆ.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…