ದೇಶ- ವಿದೇಶ

ವಿಶ್ವದ ಅತ್ಯಂತ ದುಬಾರಿ ಮರವಿದು: ಇದ್ರಿಂದಾನೇ ತಯಾರಾಗುತ್ತೆ ಐಶಾರಾಮಿ ಸುಗಂಧ ದ್ರವ್ಯಗಳು

ನವದೆಹಲಿ: ವಿಶ್ವದಲ್ಲಿ ಅತ್ಯಂತ ದುಬಾರಿ ಮರವೊಂದಿದೆ. ಅದನ್ನು ಬೇರೆ ದುಬಾರಿ ಮರಗಳಂತೆ ಫರ್ನಿಚರ್‌ ಅಥವಾ ಮತ್ತೇನೋ ಮಾಡಲು ಬಳಸಲ್ಲ. ಬದಲಿಗೆ ಸುಗಂಧ ದ್ರವ್ಯಗಳನ್ನು ತಯಾರಿಸಲು ಬಳಸುತ್ತಾರೆ.

ಸುಗಂಧ ದ್ರವ್ಯಗಳ ಉತ್ಪಾದನೆಯಲ್ಲಿ ಬಳಸುವ ಆ ದುಬಾರಿ ಮರ ಬೇರಾವುದು ಅಲ್ಲ. ಅದುವೇ ಅಕ್ವಿಲೇರಿಯಾ. ಇದನ್ನು ವುಡ್‌ ಆಫ್‌ ದಿ ಗಾಡ್ಸ್‌ ಎಂದೂ ಸಹ ಕರೆಯಲಾಗುತ್ತದೆ. ಸುಗಂಧ ದ್ರವ್ಯ ಉದ್ಯಮದಲ್ಲಿ ಇದನ್ನು ದ್ರವಚಿನ್ನ ಅಂತಲೂ ಕರೆಯಲಾಗುತ್ತದೆ.

ಈ ಮರವನ್ನು ಶತಮಾನಗಳಿಂದ ವಿಶಿಷ್ಟ ಸುಗಂಧಕ್ಕಾಗಿ ಬಳಸಲಾಗುತ್ತದೆ. ಈ ಅಮೂಲ್ಯವಾದ ಮರವು ಆಗ್ನೇಯ ಏಷ್ಯಾದ ದಟ್ಟವಾದ ಮಳೆ ಕಾಡುಗಳಿಗೆ ಸ್ಥಳೀಯವಾದ ಮರವಾಗಿದೆ. ಈ ಮರಗಳಿಗೆ ನಿರ್ದಿಷ್ಟ ಅಚ್ಚು ಬಿದ್ದು ಅದಕ್ಕೆ ಸೋಂಕಿನ ರೀತಿ ಆಗುತ್ತದೆ.

ಈ ಸೋಂಕು ಉಂಟಾದಾಗ ಅಲ್ಲಿಂದ ಮರದಲ್ಲಿ ಒಂದು ರೀತಿಯ ಸ್ರಾವ ಹೊರಬರುತ್ತದೆ. ಅದಕ್ಕೆ ಔದ್‌ ಎನ್ನಲಾಗುತ್ತದೆ. ಇದು ಅದ್ಬುತ ಸುವಾಸನೆಯನ್ನು ಹೊರ ಸೂಸುತ್ತದೆ. ಇದೇ ಕೊನೆಯ ಸುಗಂಧ ತಯಾರಿಕೆಗೆ ಕಾರಣವಾಗುತ್ತದೆ. ಈ ಮರಗಳಲ್ಲಿ ಔದ್‌ ಸೃಷ್ಟಿಯಾಗೋದು ಸಂಪೂರ್ಣವಾಗಿ ನೈಸರ್ಗಿಕ ರೀತಿಯಲ್ಲೇ.

ಅಪರೂಪದ ಸಂಗತಿಯೆಂದರೆ ಈ ಮರಗಳ ಒಂದು ಭಾಗ ಮಾತ್ರ ರಾಳವನ್ನು ಉತ್ಪಾದಿಸುತ್ತದೆ. ನಂತರ ಇದು ಸಂಗ್ರಹವಾಗಲು ದಶಕಗಳನ್ನೇ ತೆಗೆದುಕೊಳ್ಳಬಹುದು. ಈ ಸ್ರಾವದ ಬೆಲೆ ಪ್ರತಿ ಕಿಲೋ ಗ್ರಾಂಗೆ ಚಿನ್ನಕ್ಕಿಂತ ದುಬಾರಿಯಾಗಿದೆ.

ಪ್ರಸ್ತುತ ಔದ್‌ನ ಬೇಡಿಕೆ ಹೆಚ್ಚಿದ್ದು, ಜನಪ್ರಿಯತೆಯ ಉಲ್ಬಣವು ಅಕ್ವಿಲೇರಿಯಾ ಮರಗಳ ಅಪಾಯಕ್ಕೆ ಕಾರಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸುಗಂಧ ದ್ರವ್ಯ ಉದ್ಯಮದಲ್ಲಿ ಔದ್‌ ಭಾರೀ ಜನಪ್ರಿಯವಾಗಿದೆ. ಪಾಶ್ಚಿಮಾತ್ಯ ಸುಗಂಧ ದ್ರವ್ಯದಲ್ಲಿ ಈ ಅಂಶ ಇರುವಂತೆ ಉತ್ಪಾದಿಸಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago