ದೇಶ- ವಿದೇಶ

ವಿಶ್ವದ ಅತ್ಯಂತ ದುಬಾರಿ ಮರವಿದು: ಇದ್ರಿಂದಾನೇ ತಯಾರಾಗುತ್ತೆ ಐಶಾರಾಮಿ ಸುಗಂಧ ದ್ರವ್ಯಗಳು

ನವದೆಹಲಿ: ವಿಶ್ವದಲ್ಲಿ ಅತ್ಯಂತ ದುಬಾರಿ ಮರವೊಂದಿದೆ. ಅದನ್ನು ಬೇರೆ ದುಬಾರಿ ಮರಗಳಂತೆ ಫರ್ನಿಚರ್‌ ಅಥವಾ ಮತ್ತೇನೋ ಮಾಡಲು ಬಳಸಲ್ಲ. ಬದಲಿಗೆ ಸುಗಂಧ ದ್ರವ್ಯಗಳನ್ನು ತಯಾರಿಸಲು ಬಳಸುತ್ತಾರೆ.

ಸುಗಂಧ ದ್ರವ್ಯಗಳ ಉತ್ಪಾದನೆಯಲ್ಲಿ ಬಳಸುವ ಆ ದುಬಾರಿ ಮರ ಬೇರಾವುದು ಅಲ್ಲ. ಅದುವೇ ಅಕ್ವಿಲೇರಿಯಾ. ಇದನ್ನು ವುಡ್‌ ಆಫ್‌ ದಿ ಗಾಡ್ಸ್‌ ಎಂದೂ ಸಹ ಕರೆಯಲಾಗುತ್ತದೆ. ಸುಗಂಧ ದ್ರವ್ಯ ಉದ್ಯಮದಲ್ಲಿ ಇದನ್ನು ದ್ರವಚಿನ್ನ ಅಂತಲೂ ಕರೆಯಲಾಗುತ್ತದೆ.

ಈ ಮರವನ್ನು ಶತಮಾನಗಳಿಂದ ವಿಶಿಷ್ಟ ಸುಗಂಧಕ್ಕಾಗಿ ಬಳಸಲಾಗುತ್ತದೆ. ಈ ಅಮೂಲ್ಯವಾದ ಮರವು ಆಗ್ನೇಯ ಏಷ್ಯಾದ ದಟ್ಟವಾದ ಮಳೆ ಕಾಡುಗಳಿಗೆ ಸ್ಥಳೀಯವಾದ ಮರವಾಗಿದೆ. ಈ ಮರಗಳಿಗೆ ನಿರ್ದಿಷ್ಟ ಅಚ್ಚು ಬಿದ್ದು ಅದಕ್ಕೆ ಸೋಂಕಿನ ರೀತಿ ಆಗುತ್ತದೆ.

ಈ ಸೋಂಕು ಉಂಟಾದಾಗ ಅಲ್ಲಿಂದ ಮರದಲ್ಲಿ ಒಂದು ರೀತಿಯ ಸ್ರಾವ ಹೊರಬರುತ್ತದೆ. ಅದಕ್ಕೆ ಔದ್‌ ಎನ್ನಲಾಗುತ್ತದೆ. ಇದು ಅದ್ಬುತ ಸುವಾಸನೆಯನ್ನು ಹೊರ ಸೂಸುತ್ತದೆ. ಇದೇ ಕೊನೆಯ ಸುಗಂಧ ತಯಾರಿಕೆಗೆ ಕಾರಣವಾಗುತ್ತದೆ. ಈ ಮರಗಳಲ್ಲಿ ಔದ್‌ ಸೃಷ್ಟಿಯಾಗೋದು ಸಂಪೂರ್ಣವಾಗಿ ನೈಸರ್ಗಿಕ ರೀತಿಯಲ್ಲೇ.

ಅಪರೂಪದ ಸಂಗತಿಯೆಂದರೆ ಈ ಮರಗಳ ಒಂದು ಭಾಗ ಮಾತ್ರ ರಾಳವನ್ನು ಉತ್ಪಾದಿಸುತ್ತದೆ. ನಂತರ ಇದು ಸಂಗ್ರಹವಾಗಲು ದಶಕಗಳನ್ನೇ ತೆಗೆದುಕೊಳ್ಳಬಹುದು. ಈ ಸ್ರಾವದ ಬೆಲೆ ಪ್ರತಿ ಕಿಲೋ ಗ್ರಾಂಗೆ ಚಿನ್ನಕ್ಕಿಂತ ದುಬಾರಿಯಾಗಿದೆ.

ಪ್ರಸ್ತುತ ಔದ್‌ನ ಬೇಡಿಕೆ ಹೆಚ್ಚಿದ್ದು, ಜನಪ್ರಿಯತೆಯ ಉಲ್ಬಣವು ಅಕ್ವಿಲೇರಿಯಾ ಮರಗಳ ಅಪಾಯಕ್ಕೆ ಕಾರಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸುಗಂಧ ದ್ರವ್ಯ ಉದ್ಯಮದಲ್ಲಿ ಔದ್‌ ಭಾರೀ ಜನಪ್ರಿಯವಾಗಿದೆ. ಪಾಶ್ಚಿಮಾತ್ಯ ಸುಗಂಧ ದ್ರವ್ಯದಲ್ಲಿ ಈ ಅಂಶ ಇರುವಂತೆ ಉತ್ಪಾದಿಸಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

2 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

2 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

2 hours ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

10 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

12 hours ago