ಹೈದರಾಬಾದ್: ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಅಸಾದುದ್ದೀನ್ ಓವೈಸಿ ಅವರು, ನೀವು ನನ್ನ ಮೇಲೆ ಹೇಗೆ ಆರೋಪ ಹೊರಿಸುತ್ತೀರಿ, 2024ರ ಸಂಸತ್ ಚುನಾವಣೆಯಲ್ಲಿ ನಾನು ಹೈದರಾಬಾದ್, ಔರಂಗಾಬಾದ್, ಕಿಶನ್ಗಂಜ್ ಮತ್ತು ಇತರ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಮತ್ತು ಬಿಜೆಪಿ 240 ಸ್ಥಾನಗಳನ್ನು ಪಡೆದರೆ ನಾನೇ ಹೊಣೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಏಕೆಂದರೆ ಪ್ರತಿಪಕ್ಷಗಳು ವಿಫಲವಾಗಿವೆ. ಬಿಜೆಪಿಯು ಸುಮಾರು ಶೇಕಡಾ 50ರಷ್ಟು ಹಿಂದೂ ಮತಗಳನ್ನು ಕೋಢೀಕರಿಸಿದ ಕಾರಣ ಚುನಾವಣೆಯಲ್ಲಿ ಗೆಲ್ಲುತ್ತಿದೆ. ಅವರನ್ನು ದೂಷಿಸುವ ಪ್ರಯತ್ನಗಳು ಮತ್ತು ಬಿಜೆಪಿಯ ಬಿ-ಟೀಮ್ ಎಂದು ಕರೆಯುವ ಪ್ರಯತ್ನಗಳು ತಮ್ಮ ಪಕ್ಷಕ್ಕೆ ವಿರೋಧ ಪಕ್ಷದ ದ್ವೇಷ ಹೊರತು ಬೇರೇನೂ ಅಲ್ಲ. ಏಕೆಂದರೆ ಅದು ಮುಸ್ಲಿಮರನ್ನು ಹೆಚ್ಚಾಗಿ ಪ್ರತಿನಿಧಿಸುತ್ತದೆ ಎಂದರು.
ಕಾಂಗ್ರೆಸ್ನಂತಹ ವಿರೋಧ ಪಕ್ಷಗಳು ಓವೈಸಿಯ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವನ್ನು ಹೈದರಾಬಾದ್ ಪ್ರದೇಶದ ಹೊರಗೆ ತನ್ನ ಭದ್ರಕೋಟೆಯ ಹೊರಗೆ ಬೆಳೆಸುವ ಪ್ರಯತ್ನಗಳನ್ನು ಅಪಹಾಸ್ಯ ಮಾಡಿದ್ದು, ಬಹುತೇಕ ಮುಸ್ಲಿಮರ ಮತಗಳನ್ನು ಕಸಿದುಕೊಳ್ಳುವ ಮೂಲಕ ಬಿಜೆಪಿಗೆ ಲಾಭದಾಯಕವಾಗಿದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…