ದೇಶ- ವಿದೇಶ

ಲೋಕಸಭೆ ಚುನಾವಣೆ ನಂತರ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಉಗ್ರವಾದ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದರೂ ಭಯೋತ್ಪಾದಕ ದಾಳಿಗಳು ಮಾತ್ರ ಇನ್ನೂ ನಿಂತಿಲ್ಲ. ಲೋಕಸಭೆ ಚುನಾವಣೆ ನಂತರ ಇಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಅಶಾಂತಿ ಮತ್ತೆ ಭುಗಿಲೆದ್ದಿದ್ದು, ಪಾಕ್‌ ಭಯೋತ್ಪಾದಕರ ಅಟ್ಟಹಾಸ ಜೋರಾಗಿಯೇ ಇದೆ. ದಿನದಿಂದ ದಿನಕ್ಕೆ ಪಾಕಿಸ್ತಾನದಿಂದ ನುಸುಳುತ್ತಿರುವ ಭಯೋತ್ಪಾದಕರು ಸರಣಿ ದಾಳಿ ನಡೆಸಿ ಯೋಧರು ಹಾಗೂ ನಾಗರಿಕರ ಸಾವಿಗೆ ಕಾರಣರಾಗುತ್ತಿದ್ದಾರೆ. ನಿನ್ನೆಯೂ ಕೂಡ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಗೆ ಸಿಲುಕಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಲೋಕಸಭೆ ಚುನಾವಣೆ ನಡೆದ ಬಳಿಕ ಇಲ್ಲಿಯ ತನಕ ಅಂದರೆ 42 ದಿನದಲ್ಲಿ ಸತತ 9 ಉಗ್ರರ ದಾಳಿಗಳು ನಡೆದಿವೆ. ದಾಳಿಯಿಂದ 12 ಮಂದಿ ಯೋಧರು ಹುತಾತ್ಮರಾಗಿದ್ದು, 13 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಯೋತ್ಪಾದಕರ ದಾಳಿಯಿಂದ 10 ಮಂದಿ ನಾಗರಿಕರು ಸಾವೀಗೀಡಾಗಿದ್ದು, 44 ಮಂದಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸತತ ದಾಳಿಗಳಲ್ಲಿ ಹಲವು ಉಗ್ರರನ್ನು ಹೊಡೆದುರುಳಿಸಿದ್ದು, ಎಷ್ಟು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ನಿಖರ ಮಾಹಿತಿ ಇನ್ನೂ ಸಿಕ್ಕಿಲ್ಲ. ಆದರೂ ಇನ್ನೂ ಕೂಡ ಕಣಿವೆಯಲ್ಲಿ ಉಗ್ರರ ಉಪಟಳ ನಿಂತಿಲ್ಲ ಎನ್ನುವುದು ಆತಂಕಕ್ಕಾರಿ ವಿಷಯವಾಗಿದೆ. ಜೂನ್‌ ತಿಂಗಳಿನಿಂದ ಈವರೆಗೂ ಜಮ್ಮು, ಪೂಂಚ್‌, ರಜೌರಿ, ಕಥುವಾ, ದೋಡಾ ಮತ್ತು ರಿಯಾಸಿಯ ಪ್ರದೇಶಗಳಲ್ಲಿ ಹಿಂಸಾಚಾರಗಳು ಹೆಚ್ಚಾಗುತ್ತಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ಸೇನಾ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ದೋಡಾದಲ್ಲಿನ ಪರಿಸ್ಥಿತಿ ಮತ್ತು ಅಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಸದ್ಯ ಕಥುವಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಎಚ್ಚೆತ್ತುಕೊಂಡಿದ್ದು, ಉಗ್ರರನ್ನು ಸೆದೆಬಡಿಯಲು ಸರ್ವ ರೀತಿಯಲ್ಲೂ ಸಜ್ಜಾಗಿದೆ. ಮುಂದಿನ ದಿನಗಳಲ್ಲಿ ಉಗ್ರರ ಕೃತ್ಯಗಳನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ನಾವೆಲ್ಲರೂ ಕಾದುನೋಡಬೇಕಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

6 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

20 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

20 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

20 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

20 hours ago