ದೇಶ- ವಿದೇಶ

ಕೇಂದ್ರ ಸರ್ಕಾರಕ್ಕೆ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಸಂಸದ ಈರಣ್ಣ ಕಡಾಡಿ

ನವದೆಹಲಿ: ವಿದ್ಯಾರ್ಹತೆ, ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅನಧಿಕೃತ ವೈದ್ಯರು ಹಾಗೂ ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಈರಣ್ಣ ಕಡಾಡಿ ಅವರು ಒತ್ತಾಯಿಸಿದ್ದಾರೆ.

ರಾಜ್ಯಸಭೆಯಲ್ಲಿ ಇಂದು(ಮಾರ್ಚ್.‌17) ಶೂನ್ಯ ವೇಳೆ ದೇಶದಲ್ಲಿ ಹೆಚ್ಚುತ್ತಿರುವ ನಕಲಿ ಚಿಕಿತ್ಸಾ ಪ್ರಕರಣಗಳ ಬಗ್ಗೆ ಗಮನ ಸೆಳೆದು ಮಾತನಾಡಿದ ಅವರು, ಶತಮಾನಗಳಿಂದ ಜನ ಸಾಮಾನ್ಯರು ವೈದ್ಯರಿಗೆ ದೇವರ ಸ್ಥಾನಮಾನ ನೀಡಿದ್ದಾರೆ. ಆದರೆ ಈಗ ವೈದ್ಯಕೀಯ ಕ್ಷೇತ್ರದಲ್ಲಿನ ಅತಿಯಾದ ವಾಣಿಜ್ಯೀಕರಣವು ಈ ವೃತ್ತಿಯ ಘನತೆಯನ್ನು ಅಪಾಯಕ್ಕೆ ಸಿಲುಕಿಸಿದೆ. ಮೊದಲು ವೈದ್ಯಕೀಯ ವೃತ್ತಿ ಎಂದರೆ ಜನ ಸೇವೆಯಾಗಿತ್ತು, ಆದರೆ ಇದೀಗ ಅದು ಲಾಭ-ಆಧಾರಿತ ಉದ್ಯಮವಾಗಿದೆ ಎಂದರು.

ವೈದ್ಯಕೀಯ ಕಾಲೇಜುಗಳಲ್ಲಿ ಅಧಿಕ ಶುಲ್ಕಗಳು, ಖಾಸಗಿ ಆಸ್ಪತ್ರೆಗಳ ಸಂಖ್ಯೆಯಲ್ಲಿನ ಹೆಚ್ಚಳ ಹಾಗೂ ಆರೋಗ್ಯ ಸೇವೆಗಳ ಖಾಸಗೀಕರಣವು ಅದನ್ನು ಮಾರುಕಟ್ಟೆ ಆಧಾರಿತ ವ್ಯವಸ್ಥೆಯಾಗಿ ಮಾರ್ಪಾಡು ಮಾಡಿದೆ. ಹೀಗಾಗಿ ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗಳಲ್ಲಿ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನು ವಿಮಾ ಮೊತ್ತದ ಲಾಭ ಪಡೆಯಲು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಪಿತ್ತಕೋಶ ತೆಗೆಯುವಿಕೆ, ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ, ಆಂಜಿಯೋಪ್ಲ್ಯಾಸ್ಟಿ ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಂತಹ ವಿಧಾನಗಳನ್ನು ಈಗ ಹಲವು ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದ್ದು, ವೈದ್ಯರ ಆದಾಯವೂ ಅವರು ಮಾಡುವ ಶಸ್ತ್ರ ಚಿಕಿತ್ಸೆಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ. ಅಲ್ಲದೇ ಇದರಿಂದ ರೋಗಿಗಳು ಅನಗತ್ಯವಾಗ ಶಸ್ತ್ರ ಚಿಕಿತ್ಸೆಗಳಿಗೆ ಒಳಪಡುತ್ತಿದ್ದಾರೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

8 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

22 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

39 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

54 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago