ದೇಶ- ವಿದೇಶ

ಇ.ಡಿ. ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರ ಸಾಕು ನಾಯಿ: ಸಂಸದ ಮಾಣಿಕ್ಯಂ ಟ್ಯಾಗೋರ್‌

ಚೆನ್ನೈ: ಜಾರಿ ನಿರ್ದೇಶನಾಲಯ(ಇ.ಡಿ.) ಸಂಸ್ಥೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಯಂ ಟ್ಯಾಗೋರ್‌ ಆರೋಪಿಸಿದ್ದಾರೆ.

ಛತ್ತೀಸ್‌ಗಢ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಅವರ ಮಗ ಚೈತನ್ಯ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ.ಅಧಿಕಾರಿಗಳು ಶೋಧ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇ.ಡಿ. ಸಂಸ್ಥೆಯೂ ಮೋದಿ ಮತ್ತು ಅಮಿತ್‌ ಶಾ ಅವರ ಸಾಕು ನಾಯಿಯಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಅವರು ಆ ನಾಯಿಯನ್ನು ಎಲ್ಲಿಗೆ ಬೇಕಾದರೂ ಕಳುಹಿಸಬಲ್ಲರು. ಬಘೇಲ್‌ ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದು, ಅವರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ಹೀಗಾಗಿ ನಮ್ಮ ಪಕ್ಷ ಹಾಗೂ ಛತ್ತೀಸ್‌ಗಢದ ಜನತೆ ಅವರೊಂದಿಗೆ ಇರಲಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡೆಸುತ್ತಿರುವ ಇಂತಹ ನಕಲಿ ನೀರೂಪಣೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲವೆಂಬುದು ಎಲ್ಲರಿಗೂ ತಿಳಿದಿದೆ. ಅಲ್ಲದೇ ಹಿಂದುಳಿದ ವರ್ಗದ ನಾಯಕ, ಸಾರ್ವಜನಿಕರೊಂದಿಗೆ ನಿಂತು ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಿದ್ದಕ್ಕಾಗಿ ಬಿಜೆಪಿಯೇ ಅವರನ್ನು ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

10 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

11 hours ago