ತಿರುವನಂತಪುರಂ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
ರಾಹುಲ್ ಗಾಂಧಿ ಜೊತೆ ಕ್ಷೇತ್ರ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಗಾಂಧಿ ಅವರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಬಂಡೀಪುರ ಭಾಗದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲದಿರುವುದರಿಂದ ನಿಮಗೆ ಎಷ್ಟು ಸಮಸ್ಯೆ ಆಗುತ್ತಿದೆ ಎಂಬುದು ನನಗೆ ಗೊತ್ತಾಗಿದೆ. ಈ ಸಮಸ್ಯೆಯನ್ನು ಇತ್ಯರ್ಥ ಮಾಡುವುದೇ ನನ್ನ ಗುರಿ ಎಂದರು.
ನನಗೆ ನೈಟ್ ಬ್ಯಾನ್ ವಿಚಾರವೂ ಗೊತ್ತು. ಮನುಷ್ಯ-ಪ್ರಾಣಿಗಳ ನಡುವಿನ ಸಂಘರ್ಷದ ವಿಚಾರವೂ ಗೊತ್ತು. ನಿಮ್ಮೆಲ್ಲರ ಪರವಾಗಿ ನಾನು ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಮನೆ ಹಾಗೂ ಕಚೇರಿ ನಿಮಗಾಗಿ ತೆರೆದಿರುತ್ತದೆ. ನಾನು ನಿಮ್ಮನ್ನು ನಿರಾಸೆಗೊಳಿಸಲ್ಲ ಎಂದು ಜನರಿಗೆ ಅಭಯ ನೀಡಿದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…