ದೇಶ- ವಿದೇಶ

ಐರನ್‌ ಮ್ಯಾನ್‌ 70.3 ರೇಸ್‌: ಸ್ಪರ್ಧೆ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಗೋವಾದಲ್ಲಿ ನಡೆದ ಐರನ್‌ ಮ್ಯಾನ್‌ 70.3 ಚಾಲೆಂಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಇತರೆ ಸ್ಪರ್ಧಿಗಳ ಜೊತೆ ಒಟ್ಟು 113 ಕಿ.ಮೀ.ನಷ್ಟು ದೂರ ಕ್ರಮಿಸಿ ಟ್ರಿಯಾಥ್ಲಾನ್‌ ಸವಾಲಿನಲ್ಲಿ ಪಾಲ್ಗೊಂಡ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ರೇಸ್‌ನ್ನು ತೇಜಸ್ವಿ ಸೂರ್ಯ ಅವರು, ಕೇವಲ 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅಲ್ಲದೇ, ಈ ಸ್ಪರ್ಧೆಯಲ್ಲಿ 1.9 ಕಿ.ಮೀ ಈಜು, 90 ಕಿ.ಮೀ. ಸೈಕ್ಲಿಂಗ್‌ ಹಾಗೂ 21.1 ಕಿ.ಮೀ. ಓಟ ಸೇರಿದಂತೆ ಒಟ್ಟು 113 ಕಿ.ಮೀ. ದೂರ ಕ್ರಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಖಾತೆಯಲ್ಲಿ ತೇಜಸ್ವಿ ಸೂರ್ಯರಿಗೆ ಅಭಿನಂದನೆ ಸಲ್ಲಿಸಿದ್ದು, ತೇಜಸ್ವಿ ಸೂರ್ಯ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಫಿಟ್‌ನೆಸ್‌ ಸಂಬಂಧಿತ ಚಟುವಟಿಕೆಗಳನ್ನು ಮುಂದುವರೆಸಲು ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಮಾತನಾಡಿ, ಭಾರತ ಸೇರಿದಂತೆ ವಿಶ್ವದ ಕ್ರೀಡಾಪಟುಗಳು ಹಾಗೂ ಫಿಟ್ನೆಸ್‌ ಪ್ರಿಯರಿಗಾಗಿ ಐರನ್‌ ಮ್ಯಾನ್‌ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರೇಸ್‌ ಗೋವಾದಲ್ಲಿ ನಡೆದಿದ್ದು, ಸುಮಾರು 50ಕ್ಕೂ ಅಧಿಕ ರಾಷ್ಟ್ರಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಳಿಕ, ಇದೊಂದು ಕಠಿಣ ಸ್ಪರ್ಧೆಯಾಗಿದ್ದು, ನಾನು ಕಳೆದ 4 ತಿಂಗಳಿನಿಂದ ಕಷ್ಟಕರ ತರಬೇತಿಯನ್ನು ಪಡೆದಿದ್ದೇನೆ. ಈ ಕಾರಣಕ್ಕಾಗಿಯೇ ನಾನು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿ ಯಶಸ್ವಿಯಾಗಿದ್ದೇನೆ. ಅದಕ್ಕೆ ಪ್ರಧಾನಿ ಮೋದಿ ಅವರು ಆರಂಭಿಸಿದ ಫಿಟ್‌ ಇಂಡಿಯಾ ಅಭಿಯಾನವೇ ಸ್ಫೂರ್ತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

7 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

12 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

13 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago