ದೇಶ- ವಿದೇಶ

ಐರನ್‌ ಮ್ಯಾನ್‌ 70.3 ರೇಸ್‌: ಸ್ಪರ್ಧೆ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಗೋವಾದಲ್ಲಿ ನಡೆದ ಐರನ್‌ ಮ್ಯಾನ್‌ 70.3 ಚಾಲೆಂಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಇತರೆ ಸ್ಪರ್ಧಿಗಳ ಜೊತೆ ಒಟ್ಟು 113 ಕಿ.ಮೀ.ನಷ್ಟು ದೂರ ಕ್ರಮಿಸಿ ಟ್ರಿಯಾಥ್ಲಾನ್‌ ಸವಾಲಿನಲ್ಲಿ ಪಾಲ್ಗೊಂಡ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ರೇಸ್‌ನ್ನು ತೇಜಸ್ವಿ ಸೂರ್ಯ ಅವರು, ಕೇವಲ 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅಲ್ಲದೇ, ಈ ಸ್ಪರ್ಧೆಯಲ್ಲಿ 1.9 ಕಿ.ಮೀ ಈಜು, 90 ಕಿ.ಮೀ. ಸೈಕ್ಲಿಂಗ್‌ ಹಾಗೂ 21.1 ಕಿ.ಮೀ. ಓಟ ಸೇರಿದಂತೆ ಒಟ್ಟು 113 ಕಿ.ಮೀ. ದೂರ ಕ್ರಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಖಾತೆಯಲ್ಲಿ ತೇಜಸ್ವಿ ಸೂರ್ಯರಿಗೆ ಅಭಿನಂದನೆ ಸಲ್ಲಿಸಿದ್ದು, ತೇಜಸ್ವಿ ಸೂರ್ಯ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಫಿಟ್‌ನೆಸ್‌ ಸಂಬಂಧಿತ ಚಟುವಟಿಕೆಗಳನ್ನು ಮುಂದುವರೆಸಲು ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಮಾತನಾಡಿ, ಭಾರತ ಸೇರಿದಂತೆ ವಿಶ್ವದ ಕ್ರೀಡಾಪಟುಗಳು ಹಾಗೂ ಫಿಟ್ನೆಸ್‌ ಪ್ರಿಯರಿಗಾಗಿ ಐರನ್‌ ಮ್ಯಾನ್‌ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರೇಸ್‌ ಗೋವಾದಲ್ಲಿ ನಡೆದಿದ್ದು, ಸುಮಾರು 50ಕ್ಕೂ ಅಧಿಕ ರಾಷ್ಟ್ರಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಳಿಕ, ಇದೊಂದು ಕಠಿಣ ಸ್ಪರ್ಧೆಯಾಗಿದ್ದು, ನಾನು ಕಳೆದ 4 ತಿಂಗಳಿನಿಂದ ಕಷ್ಟಕರ ತರಬೇತಿಯನ್ನು ಪಡೆದಿದ್ದೇನೆ. ಈ ಕಾರಣಕ್ಕಾಗಿಯೇ ನಾನು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿ ಯಶಸ್ವಿಯಾಗಿದ್ದೇನೆ. ಅದಕ್ಕೆ ಪ್ರಧಾನಿ ಮೋದಿ ಅವರು ಆರಂಭಿಸಿದ ಫಿಟ್‌ ಇಂಡಿಯಾ ಅಭಿಯಾನವೇ ಸ್ಫೂರ್ತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

11 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

16 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

16 hours ago