ನವದೆಹಲಿ: ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಚಾಲೆಂಜ್ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಇತರೆ ಸ್ಪರ್ಧಿಗಳ ಜೊತೆ ಒಟ್ಟು 113 ಕಿ.ಮೀ.ನಷ್ಟು ದೂರ ಕ್ರಮಿಸಿ ಟ್ರಿಯಾಥ್ಲಾನ್ ಸವಾಲಿನಲ್ಲಿ ಪಾಲ್ಗೊಂಡ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ರೇಸ್ನ್ನು ತೇಜಸ್ವಿ ಸೂರ್ಯ ಅವರು, ಕೇವಲ 8 ಗಂಟೆ 27 ನಿಮಿಷ 32 ಸೆಕೆಂಡ್ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅಲ್ಲದೇ, ಈ ಸ್ಪರ್ಧೆಯಲ್ಲಿ 1.9 ಕಿ.ಮೀ ಈಜು, 90 ಕಿ.ಮೀ. ಸೈಕ್ಲಿಂಗ್ ಹಾಗೂ 21.1 ಕಿ.ಮೀ. ಓಟ ಸೇರಿದಂತೆ ಒಟ್ಟು 113 ಕಿ.ಮೀ. ದೂರ ಕ್ರಮಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ತೇಜಸ್ವಿ ಸೂರ್ಯರಿಗೆ ಅಭಿನಂದನೆ ಸಲ್ಲಿಸಿದ್ದು, ತೇಜಸ್ವಿ ಸೂರ್ಯ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳನ್ನು ಮುಂದುವರೆಸಲು ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಮಾತನಾಡಿ, ಭಾರತ ಸೇರಿದಂತೆ ವಿಶ್ವದ ಕ್ರೀಡಾಪಟುಗಳು ಹಾಗೂ ಫಿಟ್ನೆಸ್ ಪ್ರಿಯರಿಗಾಗಿ ಐರನ್ ಮ್ಯಾನ್ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರೇಸ್ ಗೋವಾದಲ್ಲಿ ನಡೆದಿದ್ದು, ಸುಮಾರು 50ಕ್ಕೂ ಅಧಿಕ ರಾಷ್ಟ್ರಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಳಿಕ, ಇದೊಂದು ಕಠಿಣ ಸ್ಪರ್ಧೆಯಾಗಿದ್ದು, ನಾನು ಕಳೆದ 4 ತಿಂಗಳಿನಿಂದ ಕಷ್ಟಕರ ತರಬೇತಿಯನ್ನು ಪಡೆದಿದ್ದೇನೆ. ಈ ಕಾರಣಕ್ಕಾಗಿಯೇ ನಾನು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿ ಯಶಸ್ವಿಯಾಗಿದ್ದೇನೆ. ಅದಕ್ಕೆ ಪ್ರಧಾನಿ ಮೋದಿ ಅವರು ಆರಂಭಿಸಿದ ಫಿಟ್ ಇಂಡಿಯಾ ಅಭಿಯಾನವೇ ಸ್ಫೂರ್ತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…