ದೇಶ- ವಿದೇಶ

ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್‌ರಿಗೆ ಮನವರಿಕೆ ಮಾಡಿದ್ದಾರೆ.

ನಮ್ಮ ಭಾಗದಲ್ಲಿ ಅತಿ ಹೆಚ್ಚು ಕೃಷಿ ಭೂಮಿಯಿದೆ. ಕಾಡಂಚಿನ ಗ್ರಾಮಗಳಲ್ಲಿ ಆನೆಗಳ ದಾಳಿಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಭೂಮಿಯಲ್ಲಿ ಆನೆಗಳ ಚಲನ ವಲನ ತಡೆಗಟ್ಟಬೇಕು. ಕೃಷಿ ಭೂಮಿಯತ್ತ ಆನೆಗಳು ಬಾರದಂತೆ ದೊಡ್ಡ ರೈಲ್ವೆ ಬ್ಯಾರಿಕೇಡ್‌ ಅಳವಡಿಸುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸಂಸದ ಯದುವೀರ್‌ ಒಡೆಯರ್‌ ಅವರು ರೈತರ ಪರ ಧ್ವನಿ ಎತ್ತುತ್ತಿತ್ತು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಅನ್ನದಾತರ ಏಳಿಗೆಗೆ ಶ್ರಮ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದರ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

6 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

20 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

37 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

52 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago