ನವದೆಹಲಿ: ಕೆಲವು ದಿನಗಳ ಹಿಂದೆ ಅಧಿಕಾರಿಗಳು, ರೈತರು ಹಾಗೂ ಬೆಳೆಗಾರರು ಏಲ್ಲಕ್ಕಿ ಹಾಗೂ ಕರಿಮೆಣಸನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಿದ್ದರು. ಈ ವಿಚಾರವನ್ನು ತಿಳಿದ ಕೊಡಗು ಪ್ಲಾಟರ್ಸ್ ಕ್ಲಬ್ ಅವರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿಯಾಗಿ ಅವರ ಬೇಡಿಕೆಗಳನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಈ ವಿಷಯದ ಕುರಿತು ಇಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ.
ಕೇಂದ್ರ ಸಚಿವರನ್ನು ಭೇಟಿಯಾಗಿರುವ ಕುರಿತು ಯದುವೀರ್ ಒಡೆಯರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ರೈತರ ಮುಖ್ಯ ತೊಂದರೆಯಾದ ಕರಿಮೆಣಸಿನ ಜಿಎಸ್ಟಿ ವಿಷಯ ಕುರಿತು ಚರ್ಚಿಸಲು ಇಂದು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ರೈತರ ಕೃಷಿ ಉತ್ಪನ್ನ ವರ್ಗೀಕರಣ ಹಾಗೂ ರಫ್ತುಗಳ ಮೇಲೆ ನಡೆಯುವಂತಹ ಪರಿಣಾಮಗಳನ್ನು ತಿಳಿಸಿ, ವಿನಾಯಿತಿ ಮುಂದುವರಿಕೆಗೆ ವಿನಂತಿಸಲಾಗಿದೆ ಎಂದು ಭೇಟಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…