ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ನಿನ್ನೆಯ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗೆ ಸೇರುವ ಹಳೆ ಕೆಸರೆ ಗ್ರಾಮದ ಬಳಿ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಅಲ್ಲಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕನ್ನಡದಲ್ಲಿ ಪ್ರಸ್ತಾಪ ಮಾಡುವ ಮೂಲಕ ಗಮನ ಸೆಳೆದರು.
ಅವೈಜ್ಞಾನಿಕವಾಗಿ ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡಿದ್ದು, ಇದರಿಂದ ಕೊಳೆತ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮದ ನಿವಾಸಿಗಳು ನಿರಂತರ ಆರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನು ಪಾಲಿಸಿಲ್ಲ ಎಂದು ಅಲ್ಲಿನ ಸಮಸ್ಯೆಗಳ ಬಗ್ಗೆ ವಿವರಿಸಿದರು.
ಹಾಗೆಯೇ, ಈ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದ ಜಾಗವಿದ್ದು, ಅಲ್ಲಿಯೂ, ಅವೈಜ್ಞಾನಿಕವಾಗಿ ತ್ಯಾಜ್ಯ ಸುಡುವುದು ಹೆಚ್ಚಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅವೈಜ್ಞಾನಿಕ ಘಟಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…