ದೇಶ- ವಿದೇಶ

ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಸಂಸದ ಯದುವೀರ್‌ ಆಗ್ರಹ

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ನಿನ್ನೆಯ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗೆ ಸೇರುವ ಹಳೆ ಕೆಸರೆ ಗ್ರಾಮದ ಬಳಿ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಅಲ್ಲಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕನ್ನಡದಲ್ಲಿ ಪ್ರಸ್ತಾಪ ಮಾಡುವ ಮೂಲಕ ಗಮನ ಸೆಳೆದರು.

ಅವೈಜ್ಞಾನಿಕವಾಗಿ ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡಿದ್ದು, ಇದರಿಂದ ಕೊಳೆತ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮದ ನಿವಾಸಿಗಳು ನಿರಂತರ ಆರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನು ಪಾಲಿಸಿಲ್ಲ ಎಂದು ಅಲ್ಲಿನ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಹಾಗೆಯೇ, ಈ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದ ಜಾಗವಿದ್ದು, ಅಲ್ಲಿಯೂ, ಅವೈಜ್ಞಾನಿಕವಾಗಿ ತ್ಯಾಜ್ಯ ಸುಡುವುದು ಹೆಚ್ಚಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅವೈಜ್ಞಾನಿಕ ಘಟಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

9 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

31 mins ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

1 hour ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

1 hour ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

2 hours ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

2 hours ago