ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ನಿನ್ನೆಯ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗೆ ಸೇರುವ ಹಳೆ ಕೆಸರೆ ಗ್ರಾಮದ ಬಳಿ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಅಲ್ಲಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕನ್ನಡದಲ್ಲಿ ಪ್ರಸ್ತಾಪ ಮಾಡುವ ಮೂಲಕ ಗಮನ ಸೆಳೆದರು.
ಅವೈಜ್ಞಾನಿಕವಾಗಿ ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡಿದ್ದು, ಇದರಿಂದ ಕೊಳೆತ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮದ ನಿವಾಸಿಗಳು ನಿರಂತರ ಆರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನು ಪಾಲಿಸಿಲ್ಲ ಎಂದು ಅಲ್ಲಿನ ಸಮಸ್ಯೆಗಳ ಬಗ್ಗೆ ವಿವರಿಸಿದರು.
ಹಾಗೆಯೇ, ಈ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದ ಜಾಗವಿದ್ದು, ಅಲ್ಲಿಯೂ, ಅವೈಜ್ಞಾನಿಕವಾಗಿ ತ್ಯಾಜ್ಯ ಸುಡುವುದು ಹೆಚ್ಚಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅವೈಜ್ಞಾನಿಕ ಘಟಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…