ಹೊಸದಿಲ್ಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು ರೂ.20 ಲಕ್ಷಕ್ಕೆ ಹೆಚ್ಚಿಸಿದೆ.
ಕಾರ್ಪೊರೇಟ್ ಅಲ್ಲದೆ ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ವಿತ್ತ ಸಚಿವಾಲಯವು ತಿಳಿಸಿದೆ. ಈ ಸಂಬಂಧ ಗುರುವಾರ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಜುಲೈನಲ್ಲಿ ಮಂಡನೆಯಾಗಿದ್ದ 2024-25 ನೇ ಸಾಲಿನ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಾಲದ ಮಿತಿ ಏರಿಕೆ ಬಗ್ಗೆ ಪ್ರಸ್ತಾಪಿಸಿದರು. ತರುಣ್ ವರ್ಗದಡಿ ರೂ 10 ಲಕ್ಷ ಸಾಲ ಪಡೆದು, ಸಕಾಲದಲ್ಲಿ ಮರುಪಾವತಿ ಮಾಡಿದವರಿಗಷ್ಟೆ ಈ ಸೌಲಭ್ಯ ಸಿಗಲಿದೆ ಎಂದು ಅವರು ಹೇಳಿದ್ದರು.
ತರುಣ್ ಪ್ಲಸ್ ವಿಭಾಗದಲ್ಲಿ 10 ಲಕ್ಷದಿಂದ 20 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಈ ಕ್ರಮವು ದೇಶದಲ್ಲಿ ಉದ್ಯಮಶೀಲ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಬದ್ಧವಾಗಿದೆ ಎಂದು ಹೇಳಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…