ದೇಶ- ವಿದೇಶ

ಮುದ್ರಾ ಯೋಜನೆ: ಸಾಲಮಿತಿ 20ಲಕ್ಷ ರೂ.ಗಳಿಗೆ ಹೆಚ್ಚಳ

ಹೊಸದಿಲ್ಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು ರೂ.20 ಲಕ್ಷಕ್ಕೆ ಹೆಚ್ಚಿಸಿದೆ.

ಕಾರ್ಪೊರೇಟ್‌ ಅಲ್ಲದೆ ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ವಿತ್ತ ಸಚಿವಾಲಯವು ತಿಳಿಸಿದೆ. ಈ ಸಂಬಂಧ ಗುರುವಾರ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಜುಲೈನಲ್ಲಿ ಮಂಡನೆಯಾಗಿದ್ದ 2024-25 ನೇ ಸಾಲಿನ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಾಲದ ಮಿತಿ ಏರಿಕೆ ಬಗ್ಗೆ ಪ್ರಸ್ತಾಪಿಸಿದರು. ತರುಣ್‌ ವರ್ಗದಡಿ ರೂ 10 ಲಕ್ಷ ಸಾಲ ಪಡೆದು, ಸಕಾಲದಲ್ಲಿ ಮರುಪಾವತಿ ಮಾಡಿದವರಿಗಷ್ಟೆ ಈ ಸೌಲಭ್ಯ ಸಿಗಲಿದೆ ಎಂದು ಅವರು ಹೇಳಿದ್ದರು.

ತರುಣ್‌ ಪ್ಲಸ್‌ ವಿಭಾಗದಲ್ಲಿ 10 ಲಕ್ಷದಿಂದ 20 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಈ ಕ್ರಮವು ದೇಶದಲ್ಲಿ ಉದ್ಯಮಶೀಲ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಬದ್ಧವಾಗಿದೆ ಎಂದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚಿವ ಸುಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…

14 mins ago

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…

33 mins ago

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

45 mins ago

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

1 hour ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

1 hour ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

2 hours ago