ನವದೆಹಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ವಿಶೇಷ ವಿಮಾನದ ಮೂಲಕ ಕರೆತರಲಾಗಿದೆ.
ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಎನ್ಐಎ ಬಂಧನ ಪ್ರಕ್ರಿಯೆ ಮುಗಿಸಿದ್ದು, ಸ್ಥಳದಲ್ಲಿ ಭಾರಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಭಾರತಕ್ಕೆ ಗಡಿಪಾರಾಗಿರುವುದರಿಂದ ತಪ್ಪಿಸಿಕೊಳ್ಳಲು ರಾಣಾ ಅಮೇರಿಕಾದ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಆತನ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಗಡೀಪಾರಿನಿಂದ ತಪ್ಪಿಸಿಕೊಳ್ಳುವ ರಾಣಾನ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಇಂದು ಭಾರತಕ್ಕೆ ಕರೆತರಲಾಗಿದೆ.
ಲಾಸ್ ಏಂಜಲೀಸ್ನ ಮೆಟ್ರೋಪಾಲಿಟನ್ ಜೈಲಿನಲ್ಲಿದ್ದ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ರಾಣಾ (64)ನನ್ನು ಭಾರತದ ಬಹು ಏಜೆನ್ಸಿ ತಂಡವು ಭಾರತಕ್ಕೆ ಕರೆತರಲು ಪ್ರಕ್ರಿಯೆ ನಡೆಸಿತು.
ರಾಣಾ 2008ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಅಮೇರಿಕನ್ ಪ್ರಜೆ ಡೇವಿಡ್ ಕೊಲಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ನಿಕಟ ಸಹಚರನಾಗಿದ್ದ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…