ದೇಶ- ವಿದೇಶ

ಮುಂಬೈ ಬಿಎಂಡಬ್ಲ್ಯೂ ಕಾರು ಅಪಘಾತ: ಚಾಲಕನ ವಿರುದ್ಧ ಲುಕೌಟ್‌ ನೋಟಿಸ್

ಮುಂಬೈ: ಶಿವಸೇನಾ ಪಕ್ಷದ ಸ್ಥಳೀಯ ಮುಖಂಡನ ಪುತ್ರ ಚಾಲನೆ ಮಾಡುತ್ತಿದ್ದ ಎನ್ನಲಾದ ಬಿಎಂಡಬ್ಲ್ಯೂ ಕಾರು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆ ಮೃತಪಟ್ಟಿದ್ದ ಘಟನೆ ಭಾನುವಾರ(ಜು.8) ನಡೆದಿತ್ತು. ಈ ಪ್ರಕರಣ ಸಂಬಂಧ ಕಾರು ಚಾಲನೆ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದಾರೆ.

ಅಪಘಾತ ನಡೆಸಿ ಪರಾರಿಯಾಗಿರುವ ಆರೋಪಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಣದ ನಾಯಕ ರಾಜೇಶ್‌ ಶಾ ಅವರು ಪುತ್ರ ಮಿಹಿರ್ ಶಾ ಎನ್ನಲಾಗಿದೆ. ಆರೋಪಿಯ ಬಂಧನಕ್ಕೆ ಪ್ರಯತ್ನಿಸುತ್ತಿರುವ ಪೊಲೀಸರು ವಿದೇಶಕ್ಕೆ ಹಾರದಂತೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.

ಈ ವೇಳೆ ಶಿಂಧೆ ಬಣದ ಶಿವಸೇನೆಯ ಪಾಲ್ಗರ್ ಜಿಲ್ಲೆಯ ಮುಖಂಡರಾಗಿರುವ ರಾಜೇಶ್ ಚಾಹ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಚಾಹ್ ಅವರ ಪುತ್ರನಿಗಾಗಿ ಶೋಧ ಕಾರ್ಯ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ಚಾಹ್ ಅವರ ಪುತ್ರ ಮಿಹಿರ್ ಶಾಹ್ ಪೊಲೀಸರಿಗೆ ಶರಣಾಗುವ ಸಾಧ್ಯತೆಯಿದೆಯನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…

17 mins ago

ಅಮೆರಿಕ-ಇರಾನ್ ಶಾಂತಿ ಒಪ್ಪಂದ : ಕಚ್ಚಾ ತೈಲ ಬೆಲೆ ಭಾರೀ ಇಳಿಕೆ

ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…

1 hour ago

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…

3 hours ago

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

5 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

7 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

9 hours ago