Mumbai train blast case: 12 accused acquitted.
ಮುಂಬೈ : 2006 ರ ಮುಂಬೈ ರೈಲು ಸ್ಛೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾದ 12 ಜನರನ್ನು ಬಾಂಬೆ ಉಚ್ಚ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ.
12 ಜನರಲ್ಲಿ ಐವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ರೈಲು ಬಾಂಬ್ ಸ್ಛೋಟದಲ್ಲಿ 187 ಜನರು ಸಾವನ್ನಪ್ಪಿದರೆ, 829 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿ ಅನಿಲ್ ಕಿಲೋರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಸಿ ಚಂದಕ್ ಅವರಿದ್ದ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದ್ದು, ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸದಿದ್ದರೆ, ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಹೇಳಿದೆ.
ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ. ಆರೋಪಿಗಳು ಅಪರಾಧ ಮಾಡಿದ್ದಾರೆ ಎಂದು ನಂಬುವುದು ಕಷ್ಟ. ಆದ್ದರಿಂದ ಅವರ ಅಪರಾಧವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ತನ್ನ ತೀರ್ಪೀನಲ್ಲಿ ಹೇಳಿದೆ.
ಜುಲೈ 11, 2006 ರಂದು ಸಂಜೆ 6.25ರಿಂದ ಸಂಜೆ 6.28 ರ ನಡುವೆ ಏಳು ಅತ್ಯಾಧುನಿಕ, ಸ್ಛೋಟಕ ಸಾಧನಗಳು ಪಶ್ಚಿಮ ಮಾರ್ಗದಲ್ಲಿ 7 ಉಪನಗರ ರೈಲುಗಳ ಪ್ರಥಮ ದರ್ಜೆ ಪುರುಷರ ವಿಭಾಗಗಳನ್ನು ಭೇದಿಸಿ 187 ಜನರನ್ನು ಬಲಿ ತೆಗೆದುಕೊಂಡಿದ್ದವು. ಘಟನೆಯಲ್ಲಿ 829 ಜನರು ಗಾಯಗೊಂಡಿದ್ದರು.
ದಾಳಿಕೋರರು ದೂರದ ಉಪನಗರಗಳಿಗೆ ಹೋಗುತ್ತಿದ್ದ ಜನದಟ್ಟಣೆಯ ರೈಲುಗಳನ್ನು ಗುರಿಯಾಗಿಸಿಕೊಂಡಿದ್ದರು. ಮಾತುಂಗಾ ಮತ್ತು ಮೀರಾ ರಸ್ತೆ ರೈಲು ನಿಲ್ದಾಣಗಳ ನಡುವೆ ಚಲಿಸುವ ರೈಲುಗಳಲ್ಲಿ ಸ್ಛೋಟಗಳು ನಡೆದಿದ್ದವು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…