ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳನ್ನು ಪ್ರವೇಶ ಮಾಡಿದೆ. ಈ ಮೂಲಕ ಜುಲೈ.2ರಂದು ಮುಂಗಾರು ಇಡೀ ದೇಶವನ್ನು ಆವರಿಸಿದಂತಾಗಿದೆ. ಸಾಮಾನ್ಯವಾಗಿ ಜುಲೈ.8ರಂದು ಮುಂಗಾರು ದೇಶವನ್ನು ವ್ಯಾಪಿಸುತ್ತಿತ್ತು ಎಂದು ಇಲಾಖೆ ಮಾಹಿತಿ ನೀಡಿದೆ.
ಮೇ.30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿತ್ತು. ಮಹಾರಾಷ್ಟ್ರದವರೆಗೆ ತಲುಪಿದ ಬಳಿಕ ವೇಗ ಕಳೆದುಕೊಂಡಿತ್ತು. ಪರಿಣಾಮ ವಾಯುವ್ಯ ಭಾರತದಲ್ಲಿ ತಾಪಮಾನ ಏರಿಕೆಯಾಗಿತ್ತು. ಕ್ರಮೇಣ ವೇಗ ಪಡೆದ ಮುಂಗಾರು ವಾಡಿಕೆಗಿಂತ ಆರು ದಿನಗಳ ಮೊದಲೇ ದೇಶವನ್ನು ವ್ಯಾಪಿಸಿದೆ.
ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ಭಾರೀ ಮಳೆಯಿಂದಾಗಿ ಪಶ್ಚಿಮ ಹಿಮಾಲಯದ ರಾಜ್ಯಗಳ ಮತ್ತು ದೇಶದ ಮಧ್ಯ ಭಾಗಗಳಲ್ಲಿರುವ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ಪ್ರವಾಹಕ್ಕೆ ಕಾರಣವಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ದೇಶಕ್ಕೆ ಪ್ರವೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆಯಿಂದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…