ದೇಶ- ವಿದೇಶ

ಮುಂಬೈ ಸರಣಿ ಸ್ಫೋಟದ ಅಪರಾಧಿ ಮೊಹಮ್ಮದ ಅಲಿಖಾನ್‌ ಹತ್ಯೆ

ಮುಂಬೈ:  1993ರ ಬಾಂಬೆ ಸರಣಿ ಸ್ಫೋಟದ ಆರೋಪಿ ಮೊಹಮದ್ ಅಲಿಖಾನ್‍ನನ್ನು ಭಾನುವಾರ(ಜೂ.2) ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರದ ಜೈಲಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮದ್ ಅಲಿಖಾನ್‍ರ ಶಿರಚ್ಛೇದ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪ್ರತೀಕ್ ಪಾಟೀಲ್, ದೀಪಕ್ ಖೋಟ್, ಸಂದೀಪ್ ಚವ್‍ಹಾಣ್, ರಿತುರಾಜ್ ಇನಾಮದಾರ್ ಮತ್ತು ಸೌರಭ್‍ಸಿದ್ಧ ಎಂಬುವ ಖೈದಿಗಳೇ ಮೊಹಮ್ಮದ ಅಲಿಖಾನ್‌ನನ್ನು ಹತ್ಯೆ ಮಾಡಿರುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ವಿವರ
ಮೊಹಮದ್ ಅಲಿಖಾನ್ ಇದ್ದ ಬ್ಯಾರಕ್‌ನಲ್ಲಿಯೇ,  ಇನ್ನೊಂದು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳನ್ನು  ಇರಿಸಲಾಗಿತ್ತು.

ಮೃತ ಮೊಹಮದ್ ಅಲಿ ಖಾನ್ ಸೇರಿದಂತೆ ಈ ಎಲ್ಲಾ ಆರೋಪಿಗಳು ಒಂದೇ ಬ್ಯಾರಕ್‍ನಲ್ಲಿ ಇದ್ದರು. ಇದರಿಂದಾಗಿ ಅವರ ನಡುವೆ ಏನಾದರೂ ಜಗಳವಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲ್ಲಾಪುರ ಜೈಲಿನಲ್ಲಿರುವ ಮುಂಬೈ ಸ್ಫೋಟದ ಇತರ ಆರೋಪಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜೈಲಿನೊಳಗೆ ನಡೆದ ಈ ಹತ್ಯೆಗೆ ಪ್ರಮುಖ ಕಾರಣ ಏನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಜೈಲು ಇಲಾಖೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಸ್ವಾತಿ ಸಾಠೆ ಮಾಹಿತಿ ನೀಡಿದ್ದಾರೆ.

ಯಾರು ಈ ಮೊಹಮ್ಮದ್‌ ಅಲಿಖಾನ್‌
ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಮೊಹಮದ್ ಅಲಿಖಾನ್ ಅಲಿಯಾಸ್ ಮುನ್ನಾ ಅಲಿಯಾಸ್ ಮನೋಜ್‍ಕುಮಾರ್ ಭನ್ವರ್‍ಲಾಲ್ ಗುಪ್ತಾ ಕೋಲ್ಹಾಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಐವರು ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 1993ರ ಮಾರ್ಚ್ 12ರಂದು ಬಾಂಬೆ ಸ್ಟಾಕ್ ಎಕ್ಸ್‌ ಚೆಂಜ್ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಜನರು ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು ಮತ್ತು ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago