ಮುಂಬೈ: ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆ ಕಾರಣಕ್ಕೆ ಆಸ್ಪತ್ರೆಗೆ ತೆರಳಿದ್ದೆ ಅಷ್ಟೇ ಎಂದು ತಮ್ಮ ಆರೋಗ್ಯದ ಬಗ್ಗೆ ರತನ್ ಟಾಟಾ ಮಾಹಿತಿ ನೀಡಿದ್ದಾರೆ.
ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿರುವ 86 ವರ್ಷದ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರು ಪೇರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿತ್ತು.
ಈ ಹಿನ್ನೆಲೆಯಲ್ಲಿ ರತನ್ ಟಾಟಾ ಅಭಿಮಾನಿಗಳು ಹಾಗೂ ಹಿತೈಷಿಗಳು ಭಾರೀ ಆತಂಕಕ್ಕೆ ಒಳಗಾಗಿದ್ದರು.
ಈ ಬಗ್ಗೆ ಸ್ವತಃ ರತನ್ ಟಾಟಾ ಅವರೇ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆಗೆಂದು ಆಸ್ಪತ್ರೆಗೆ ತೆರಳಿದ್ದೆ ಅಷ್ಟೆ. ನನ್ನ ಆರೋಗ್ಯ ಉತ್ತಮವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…