ದೇಶ- ವಿದೇಶ

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ, ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ?? ಎಂದು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

23 mins ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

39 mins ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

59 mins ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

2 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

2 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

3 hours ago