ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.
ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ, ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ?? ಎಂದು ಪ್ರಶ್ನಿಸಿದ್ದಾರೆ.
ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…