ದೇಶ- ವಿದೇಶ

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ, ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ?? ಎಂದು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

2 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

2 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

2 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

2 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

5 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

5 hours ago