ದೇಶ- ವಿದೇಶ

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ, ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ?? ಎಂದು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

2 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

2 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

2 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

2 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

2 hours ago