ಬ್ಯಾಂಕಾಕ್: ಮಯನ್ಮಾರ್ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ.
1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಟ್ಟಡ ಕುಸಿತದಿಂದ ಅವಶೇಷಗಳಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ಮಯನ್ಮಾರ್ನ ನೈಪಿತಾವು ಸೇರಿದಂತೆ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಇನ್ನು ಸಂತ್ರಸ್ತವಾಗಿರುವ ಮಯನ್ಮಾರ್ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ಕಿಟ್, ಸೋಲಾರ್ ಲೈಟ್, ಔಷಧಗಳ ನೆರವನ್ನು ಭಾರತ ನೀಡಿದೆ.
ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳ…
ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್ 17ರಂದು ರಾಜ್ಯ…
ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್ಲೈನ್ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ…
ಮೈಸೂರು : ಭಗವಾನ್ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ…
ಮೈಸೂರು : ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.…
ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್ನ ಅಧ್ಯಕ್ಷ ಆರ್ಯನ್…