ದೇಶ- ವಿದೇಶ

ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿದರೆ ಒಳಿತು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ

ನವದೆಹಲಿ: ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಸಚಿವರಿಗೆ ಅಭಿವೃದ್ಧಿ ಕೆಲಸ ಮಾಡಬೇಕು ಎಂಬ ಮನಸ್ಸಿಲ್ಲ. ಯಾವ ಸಚಿವರು ಕೂಡ ವಿಧಾನಸೌಧಕ್ಕೂ ಸರಿಯಾಗಿ ಹೋಗುತ್ತಿಲ್ಲ. ಯಾವಾಗ ಸಿಎಂ ರಾಜೀನಾಮೆ ಕೊಡುತ್ತಾರೋ, ಸಿದ್ದರಾಮಯ್ಯ ಪರ ಮಾತನಾಡಲು ದೆಹಲಿಗೆ ಯಾವಾಗ ಹೋಗಬೇಕು ಎಂಬ ಆತಂಕದಲ್ಲಿದ್ದಾರೆ ಎಂದರು.

ಇವತ್ತಲ್ಲ ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಹೈಕೋರ್ಟ್‌ ತೀರ್ಪು ಬಂದ ಬಳಿಕವಾದರೂ ಅವರು ರಾಜೀನಾಮೆ ನೀಡಲಿದ್ದಾರೆ. ಇವತ್ತಲ್ಲ ನಾಳೆ ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿದೆ. ಈ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಒಂದಾದರೂ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಯಾವುದೇ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿಲ್ಲ ಎಂದು ಟೀಕೆ ಮಾಡಿದರು.

ಇನ್ನು ಗ್ಯಾರಂಟಿ ಯೋಜನೆ ಬಗ್ಗೆ ಕಿಡಿಕಾರಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಬೊಕ್ಕಸ ಖಾಲಿಯಾಗಿದೆ. ಕೆಎಸ್‌ಆರ್‌ಟಿಸಿಗೆ 4500 ಕೋಟಿ ರೂ ಕೊಡಬೇಕಿದೆ. ಇನ್ನೂ ಮೂರ್ನಾಲ್ಕು ತಿಂಗಳು ಹೀಗೇಯೇ ಮುಂದುವರಿದರೆ ಕೆಎಸ್‌ಆರ್‌ಟಿಸಿ ಬಾಗಿಲು ಮುಚ್ಚಲಿದೆ. ಸಂಬಳ ಕೊಡಲು ದುಡ್ಡಿಲ್ಲ ಎಂದು ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

10 mins ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

15 mins ago

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

31 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

33 mins ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

44 mins ago

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

1 hour ago