ಬೀಜಿಂಗ್: ಕೋವಿಡ್ ವೈರಸ್ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
ಹ್ಯೂಮನ್ ಮೆಟಾಪ್ನ್ಯೂಮೊ ವೈರಸ್ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್ನಿಂದ ಪಾರಾಗಲು ಸ್ಕ್ರೀನಿಂಗ್, ಪತ್ತೆ ಮತ್ತು ಪ್ರತ್ಯೇಕತೆಯ ಪ್ರೊಟೋಕಾಲ್ಗಳ ಮೊರೆ ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚೀನಾ ದೇಶದಲ್ಲಿ ಎಚ್ಎಂಪಿವಿಯ ವೈರಾಣು ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿಶೇಷವಾಗಿ ಉತ್ತರ ಪ್ರಾಂತ್ಯದಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಅತೀ ಹೆಚ್ಚಾಗಿ ಬಾಧಿಸುತ್ತಿದೆ.
ಇನ್ನು ಚೀನಾದಲ್ಲಿ ಕೋವಿಡ್ ಮಾದರಿಯ ಸ್ಥಿತಿ ಎದುರಾಗದಂತೆ ತಡೆಗಟ್ಟಲು ಚೀನಾ ಸರ್ಕಾರ ಹೆಚ್ಚಿನ ಕ್ರಮ ಕೈಗೊಂಡಿದ್ದು, ಜನತೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.
ರಾಯಿಟರ್ಸ್ ವರದಿ ಪ್ರಕಾರ, ಚೀನಾದಲ್ಲಿ ಎಚ್ಎಂಪಿವಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ರೈನೋವೈರಸ್ನಂತಹ ಇತರ ಸಾಂಕ್ರಾಮಿಕ ರೋಗಗಳನ್ನು ಹರಡುವ ಅಪಾಯದಲ್ಲಿದೆ ಎಂದು ಹೇಳಿದ್ದು, ಜನತೆಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.
ಈ ವೈರಸ್ ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಕಾಯಿಲೆಗಳನ್ನು ಉಂಟು ಮಾಡಬಹುದು. ಚಿಕ್ಕಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗ ನಿರೋಧಕ ಶಕ್ತಿ ಹೊಂದಿರುವ ಜನರು ಈ ರೋಗಕ್ಕೆ ಬೇಗ ಗುರಿಯಾಗುತ್ತಾರೆ. ಈ ವೈರಸನ್ನು ಮೊದಲಿಗೆ 2001ರಲ್ಲಿ ಪತ್ತೆ ಮಾಡಲಾಗಿತ್ತು.
ಇನ್ನು ಚೀನಾದಲ್ಲಿ ಕೆಮ್ಮು, ಜ್ವರ, ಮೂಗು ಕಟ್ಟುವಿಕೆ, ಉಸಿರಾಟದ ತೊಂದರೆ ಇರುವವರು ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪರೀಕ್ಷೆ ನಡೆಸಿದ ಬಳಿಕ ಒಂದು ವೇಳೆ ಅವರಿಗೆ ಸೋಂಕು ಹರಡಿದೆ ಎಂದು ದೃಢವಾದರೆ, ಆ ವ್ಯಕ್ತಿಗಳನ್ನು ಪ್ರತ್ಯೇಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಯಾರೂ ಕೂಡ ಹೆದರುವ ಅವಶ್ಯಕತೆಯಿಲ್ಲ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲೆಂದರಲ್ಲಿ ಗುಂಪುಗೂಡಬಾರದು. ಆಗಾಗ್ಗೆ ಸ್ಯಾನಿಟೈಸರ್ ಬಳಸಬೇಕು ಎಂದು ಅಲ್ಲಿನ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…