ದೇಶ- ವಿದೇಶ

ಬೇರೆ ರಾಜ್ಯಗಳ ಲಾಟರಿ ನಿಯಂತ್ರಿಸುವ ಕೇರಳ ಸರ್ಕಾರದ ನಿಯಮ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ನಾಗಾಲ್ಯಾಂಡ್; ನೋಟಿಸ್ ಜಾರಿ

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇರಳ ಕಾಗದ ಲಾಟರಿಗಳ (ನಿಯಂತ್ರಣ) ತಿದ್ದುಪಡಿ ನಿಯಮಾವಳಿ- 2018ರ ಸಿಂಧುತ್ವವನ್ನು ಇತ್ತೀಚೆಗೆ ಎತ್ತಿಹಿಡಿದಿದ್ದ ಕೇರಳ ಹೈಕೋರ್ಟ್‌ ತೀರ್ಪನ್ನು ಅರ್ಜಿ ಪ್ರಶ್ನಿಸಿದೆ. ಇತರೆ ರಾಜ್ಯಗಳು ನಡೆಸುವ ಲಾಟರಿಗಳ ಮೇಲ್ವಿಚಾರಣೆ ನಡೆಸಲು ಮತ್ತು ದಂಡ ವಿಧಿಸಲು ಕೇರಳ ಸರ್ಕಾರದ ನಿಯಮಾವಳಿಗಳು ಅನುವು ಮಾಡಿಕೊಡುತ್ತವೆ.

ಇದನ್ನು ಪ್ರಶ್ನಿಸಿರುವ ನಾಗಾಲ್ಯಾಂಡ್‌ ಸರ್ಕಾರ, “ನಿಯಮಗಳು ಸಂವಿಧಾನದಲ್ಲಿ ಕಲ್ಪಿಸಿರುವ ಒಕ್ಕೂಟ ಎಂಬ ಮೂಲಭೂತ ಪರಿಕಲ್ಪನೆಗೆ ವಿರುದ್ಧವಾಗಿದ್ದು ಲಾಟರಿ (ನಿಯಂತ್ರಣ) ಕಾಯಿದೆ ಮತ್ತು ನಿಯಮಗಳ ನೇರ ಉಲ್ಲಂಘನೆಯಾಗಿದೆ. ಹೈಕೋರ್ಟ್‌ ತೀರ್ಪು ರಾಜ್ಯದೊಳಗೆ ಕೇರಳ ಸರ್ಕಾರ ಲಾಟರಿ ಮಾರಾಟದ ಏಕಸ್ವಾಮ್ಯತೆ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸುಪ್ರೀಂ ಕೋರ್ಟ್‌ ʼರಾಜ್ಯವೊಂದು ಲಾಟರಿ ಮುಕ್ತ ವಲಯವಾಗದ ಹೊರತು ಅದು ನೇರವಾಗಿ ಇಲ್ಲವೇ ಪರೋಕ್ಷವಾಗಿ ತನ್ನ ನೆಲದಲ್ಲಿ ಇತರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ತಡೆಯುವ/ನಿರ್ಬಂಧಿಸುವ/ನಿಯಂತ್ರಿಸುವ/ಕಡಿವಾಣ ಹಾಕುವ ಕ್ರಮಗಳಿಗೆ ಮುಂದಾಗುವಂತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದೆ.

andolana

Recent Posts

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

1 hour ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

1 hour ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

2 hours ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

3 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

4 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

4 hours ago