ದೇಶ- ವಿದೇಶ

ಬೇರೆ ರಾಜ್ಯಗಳ ಲಾಟರಿ ನಿಯಂತ್ರಿಸುವ ಕೇರಳ ಸರ್ಕಾರದ ನಿಯಮ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ನಾಗಾಲ್ಯಾಂಡ್; ನೋಟಿಸ್ ಜಾರಿ

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇರಳ ಕಾಗದ ಲಾಟರಿಗಳ (ನಿಯಂತ್ರಣ) ತಿದ್ದುಪಡಿ ನಿಯಮಾವಳಿ- 2018ರ ಸಿಂಧುತ್ವವನ್ನು ಇತ್ತೀಚೆಗೆ ಎತ್ತಿಹಿಡಿದಿದ್ದ ಕೇರಳ ಹೈಕೋರ್ಟ್‌ ತೀರ್ಪನ್ನು ಅರ್ಜಿ ಪ್ರಶ್ನಿಸಿದೆ. ಇತರೆ ರಾಜ್ಯಗಳು ನಡೆಸುವ ಲಾಟರಿಗಳ ಮೇಲ್ವಿಚಾರಣೆ ನಡೆಸಲು ಮತ್ತು ದಂಡ ವಿಧಿಸಲು ಕೇರಳ ಸರ್ಕಾರದ ನಿಯಮಾವಳಿಗಳು ಅನುವು ಮಾಡಿಕೊಡುತ್ತವೆ.

ಇದನ್ನು ಪ್ರಶ್ನಿಸಿರುವ ನಾಗಾಲ್ಯಾಂಡ್‌ ಸರ್ಕಾರ, “ನಿಯಮಗಳು ಸಂವಿಧಾನದಲ್ಲಿ ಕಲ್ಪಿಸಿರುವ ಒಕ್ಕೂಟ ಎಂಬ ಮೂಲಭೂತ ಪರಿಕಲ್ಪನೆಗೆ ವಿರುದ್ಧವಾಗಿದ್ದು ಲಾಟರಿ (ನಿಯಂತ್ರಣ) ಕಾಯಿದೆ ಮತ್ತು ನಿಯಮಗಳ ನೇರ ಉಲ್ಲಂಘನೆಯಾಗಿದೆ. ಹೈಕೋರ್ಟ್‌ ತೀರ್ಪು ರಾಜ್ಯದೊಳಗೆ ಕೇರಳ ಸರ್ಕಾರ ಲಾಟರಿ ಮಾರಾಟದ ಏಕಸ್ವಾಮ್ಯತೆ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸುಪ್ರೀಂ ಕೋರ್ಟ್‌ ʼರಾಜ್ಯವೊಂದು ಲಾಟರಿ ಮುಕ್ತ ವಲಯವಾಗದ ಹೊರತು ಅದು ನೇರವಾಗಿ ಇಲ್ಲವೇ ಪರೋಕ್ಷವಾಗಿ ತನ್ನ ನೆಲದಲ್ಲಿ ಇತರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ತಡೆಯುವ/ನಿರ್ಬಂಧಿಸುವ/ನಿಯಂತ್ರಿಸುವ/ಕಡಿವಾಣ ಹಾಕುವ ಕ್ರಮಗಳಿಗೆ ಮುಂದಾಗುವಂತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದೆ.

andolana

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

14 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

50 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

1 hour ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago