ದೇಶ- ವಿದೇಶ

ಬೇರೆ ರಾಜ್ಯಗಳ ಲಾಟರಿ ನಿಯಂತ್ರಿಸುವ ಕೇರಳ ಸರ್ಕಾರದ ನಿಯಮ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ನಾಗಾಲ್ಯಾಂಡ್; ನೋಟಿಸ್ ಜಾರಿ

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇರಳ ಕಾಗದ ಲಾಟರಿಗಳ (ನಿಯಂತ್ರಣ) ತಿದ್ದುಪಡಿ ನಿಯಮಾವಳಿ- 2018ರ ಸಿಂಧುತ್ವವನ್ನು ಇತ್ತೀಚೆಗೆ ಎತ್ತಿಹಿಡಿದಿದ್ದ ಕೇರಳ ಹೈಕೋರ್ಟ್‌ ತೀರ್ಪನ್ನು ಅರ್ಜಿ ಪ್ರಶ್ನಿಸಿದೆ. ಇತರೆ ರಾಜ್ಯಗಳು ನಡೆಸುವ ಲಾಟರಿಗಳ ಮೇಲ್ವಿಚಾರಣೆ ನಡೆಸಲು ಮತ್ತು ದಂಡ ವಿಧಿಸಲು ಕೇರಳ ಸರ್ಕಾರದ ನಿಯಮಾವಳಿಗಳು ಅನುವು ಮಾಡಿಕೊಡುತ್ತವೆ.

ಇದನ್ನು ಪ್ರಶ್ನಿಸಿರುವ ನಾಗಾಲ್ಯಾಂಡ್‌ ಸರ್ಕಾರ, “ನಿಯಮಗಳು ಸಂವಿಧಾನದಲ್ಲಿ ಕಲ್ಪಿಸಿರುವ ಒಕ್ಕೂಟ ಎಂಬ ಮೂಲಭೂತ ಪರಿಕಲ್ಪನೆಗೆ ವಿರುದ್ಧವಾಗಿದ್ದು ಲಾಟರಿ (ನಿಯಂತ್ರಣ) ಕಾಯಿದೆ ಮತ್ತು ನಿಯಮಗಳ ನೇರ ಉಲ್ಲಂಘನೆಯಾಗಿದೆ. ಹೈಕೋರ್ಟ್‌ ತೀರ್ಪು ರಾಜ್ಯದೊಳಗೆ ಕೇರಳ ಸರ್ಕಾರ ಲಾಟರಿ ಮಾರಾಟದ ಏಕಸ್ವಾಮ್ಯತೆ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸುಪ್ರೀಂ ಕೋರ್ಟ್‌ ʼರಾಜ್ಯವೊಂದು ಲಾಟರಿ ಮುಕ್ತ ವಲಯವಾಗದ ಹೊರತು ಅದು ನೇರವಾಗಿ ಇಲ್ಲವೇ ಪರೋಕ್ಷವಾಗಿ ತನ್ನ ನೆಲದಲ್ಲಿ ಇತರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ತಡೆಯುವ/ನಿರ್ಬಂಧಿಸುವ/ನಿಯಂತ್ರಿಸುವ/ಕಡಿವಾಣ ಹಾಕುವ ಕ್ರಮಗಳಿಗೆ ಮುಂದಾಗುವಂತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದೆ.

andolana

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

9 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

10 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

11 hours ago